ವಿಮೋಚನಕಾಂಡ 10:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
12 ಆಗ ಯೆಹೋವನು ಮೋಶೆಗೆ, “ಐಗುಪ್ತ ದೇಶದ ಮೇಲೆ ನಿನ್ನ ಕೈಯನ್ನು ಚಾಚಿ, ಮಿಡತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ” ಎಂದು ಹೇಳಿದನು.
12 ಸರ್ವೇಶ್ವರ ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ಕೈಚಾಚಿ ಮಿಡಿತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ,” ಎಂದು ಹೇಳಿದರು.
12 ಆಗ ಯೆಹೋವನು ಮೋಶೆಗೆ - ಐಗುಪ್ತದೇಶದ ಮೇಲೆ ನಿನ್ನ ಕೈಚಾಚಿ ವಿುಡಿತೆಗಳನ್ನು ಬರಮಾಡು; ಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ವಿುಡಿತೆಗಳು ತಿಂದುಬಿಡಲಿ ಎಂದು ಹೇಳಿದನು.
12 ಯೆಹೋವನು ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ನಿನ್ನ ಕೈಯನ್ನೆತ್ತು. ಆಗ ಮಿಡತೆಗಳು ಬರುವವು! ಮಿಡತೆಗಳು ಈಜಿಪ್ಟ್ ದೇಶದಲ್ಲೆಲ್ಲಾ ಹರಡಿಕೊಳ್ಳುವವು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದುಕೊಂಡ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡುವವು” ಎಂದು ಹೇಳಿದನು.
12 ಆಗ ಯೆಹೋವ ದೇವರು ಮೋಶೆಗೆ, “ಮಿಡತೆಗಳಿಗಾಗಿ ನಿನ್ನ ಕೈಯನ್ನು ಈಜಿಪ್ಟಿನ ಮೇಲೆ ಚಾಚು. ಅವು ಈಜಿಪ್ಟಿನ ಮೇಲೆ ಬಂದು, ಆಲಿಕಲ್ಲಿನ ಮಳೆಯು ದೇಶದಲ್ಲಿ ಉಳಿಸಿದ ಹಸುರಾದದ್ದನ್ನೆಲ್ಲಾ ತಿಂದುಬಿಡಲಿ,” ಎಂದರು.
ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ ‘ನಿನ್ನ ಕೋಲನ್ನು ತೆಗೆದುಕೊಂಡು ಐಗುಪ್ತದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳಬೇಕು. ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವುದು. ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ, ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರು ರಕ್ತವಾಗುವುದು” ಅಂದನು.
ಅವು ಭೂಮಿಯನ್ನೆಲ್ಲಾ ಮುಚ್ಚಿಕೊಂಡಿದ್ದರಿಂದ ನೆಲವು ಕಾಣದೇ ಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ, ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ಅವು ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.