Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮೋಶೆ ಆಕಾಶಕ್ಕೆ ಕೈಯನ್ನು ಚಾಚಿದಾಗ ಐಗುಪ್ತ ದೇಶದಲ್ಲೆಲ್ಲಾ ಮೂರು ದಿನ ಕಾರ್ಗತ್ತಲೆ ಮುಚ್ಚಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಮೋಶೆ ಆಕಾಶದತ್ತ ಕೈಚಾಚಿದಾಗ ಈಜಿಪ್ಟ್ ದೇಶದಲ್ಲೆಲ್ಲಾ ಮೂರು ದಿವಸ ಕಾರ್ಗತ್ತಲು ಮುಚ್ಚಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮೋಶೆ ಆಕಾಶಕ್ಕೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿವಸ ಕಾರ್ಗತ್ತಲು ಮುಚ್ಚಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮೋಶೆ ತನ್ನ ಕೈಯನ್ನು ಆಕಾಶದ ಕಡೆಗೆ ಚಾಚಿದಾಗ ಕಾರ್ಗತ್ತಲು ಈಜಿಪ್ಟನ್ನು ಆವರಿಸಿತು. ಕಾರ್ಗತ್ತಲು ಈಜಿಪ್ಟಿನಲ್ಲಿ ಮೂರು ದಿನಗಳವರೆಗೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ, ಈಜಿಪ್ಟ್ ದೇಶದಲ್ಲೆಲ್ಲಾ ಮೂರು ದಿನಗಳವರೆಗೆ ಘೋರವಾದ ಕತ್ತಲೆ ಕವಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:22
13 ತಿಳಿವುಗಳ ಹೋಲಿಕೆ  

ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು. ಐಗುಪ್ತ್ಯರು ಆತನ ಆಜ್ಞೆಗಳನ್ನು ಅನುಸರಿಸಲಿಲ್ಲ.


ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,


ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.


ಯೆಹೋವನ ಮಹಾ ಭಯಂಕರವಾದ ದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.


ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.


ಆ ದಿನದಲ್ಲಿ ನೀವು ಹತ್ತಿರ ಬಂದು ಬೆಟ್ಟದ ಬುಡದಲ್ಲಿ ನಿಂತುಕೊಂಡಿರಲು ಕತ್ತಲೂ, ಮೋಡವೂ, ಕಾರ್ಗತ್ತಲೂ ಕವಿದು ಆ ಬೆಟ್ಟವು ಆಕಾಶದ ತುದಿಯವರೆಗೂ ಬೆಂಕಿಯಿಂದ ಉರಿಯಿತು.


ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಹೋದನು.


“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.


ಅವರು ಹಗಲಿನಲ್ಲೇ ಕತ್ತಲೆಯಿಂದ ಸುತ್ತುವರೆದು, ಮಧ್ಯಾಹ್ನದಲ್ಲೇ ರಾತ್ರಿಯವರಂತೆ ತಡಕಾಡುತ್ತಾರೆ.


ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.


ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ, ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.


ನಿನ್ನ ಮೇಲೆ ಆಕಾಶದಲ್ಲಿ ಮಿನುಗುವ ಸಕಲ ಜ್ಯೋತಿಗಳನ್ನೂ ನಾನು ಮಸುಕುಮಾಡಿ, ನಿನ್ನ ದೇಶವನ್ನು ಕತ್ತಲು ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು