Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅಪ್ಪಣೆಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅಪ್ಪಣೆ ಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಕ್ಕೆ ವಿುಡಿತೆಗಳನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ನನ್ನ ಜನರನ್ನು ಕಳುಹಿಸಿಕೊಡದಿದ್ದರೆ, ನಾಳೆಯೇ ನಿನ್ನ ದೇಶದೊಳಗೆ ಮಿಡತೆಗಳನ್ನು ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ, ನಾಳೆಯೇ ನಾನು ನಿನ್ನ ರಾಜ್ಯದಲ್ಲಿ ಮಿಡತೆಗಳನ್ನು ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:4
15 ತಿಳಿವುಗಳ ಹೋಲಿಕೆ  

ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಯಿತು.


ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.


ಮಿಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.


ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ.


ಇದಲ್ಲದೆ ಯೆಹೋವನು, “ನಿರ್ದಿಷ್ಟವಾದ ಸಮಯವನ್ನು ನೇಮಿಸಿ, ನಾಳೆಯೇ ಈ ಕಾರ್ಯವನ್ನು ಈ ದೇಶದಲ್ಲಿ ಮಾಡುವನು ಎಂದು ಹೇಳು” ಎಂದನು.


ಹೀಗೆ ನನ್ನ ಜನಕ್ಕೂ, ನಿನ್ನ ಜನಕ್ಕೂ ನಡುವೆ ವ್ಯತ್ಯಾಸವನ್ನುಂಟು ಮಾಡುವೆನು. ನಾಳೆಯೇ ಈ ಮಹತ್ಕಾರ್ಯ ಉಂಟಾಗುವುದು’ ಎಂದು ಹೇಳಬೇಕು” ಎಂದನು.


ಫರೋಹನು ಮೋಶೆಗೆ, “ನಾಳೆ” ಎಂದನು. ಆಗ ಮೋಶೆಯು, “ನಿನ್ನ ಮಾತಿನ ಪ್ರಕಾರವೇ ಆಗಲಿ, ಇದರಿಂದ ನಮ್ಮ ದೇವರಾಗಿರುವ ಯೆಹೋವನಿಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವಿ.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವವು. ನೆಲವೇ ಕಾಣಿಸದೆ ಹೋಗುವುದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆ ಚಿಗುರುಗಳನ್ನೂ ತಿಂದುಬಿಡುವವು.


ನೀವು ಹೊಲದಲ್ಲಿ ಎಷ್ಟು ಬೀಜವನ್ನು ಬಿತ್ತಿದ್ದರೂ ಮಿಡತೆಯ ದಂಡು ಬಂದು ಅದನ್ನು ತಿಂದು ಬಿಡುವುದರಿಂದ ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು.


ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.


ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು