Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವವು. ನೆಲವೇ ಕಾಣಿಸದೆ ಹೋಗುವುದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆ ಚಿಗುರುಗಳನ್ನೂ ತಿಂದುಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೆಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವುವು; ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲ ಮರಗಳ ಎಲೆಚಿಗುರುಗಳನ್ನು ತಿಂದುಬಿಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವು ಭೂವಿುಯನ್ನೆಲ್ಲಾ ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದದ್ದೆಲ್ಲವನ್ನು ವಿುಡಿತೆಗಳು ತಿಂದುಬಿಡುವವು; ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆಚಿಗುರುಗಳನ್ನೂ ತಿಂದು ಬಿಡುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮಿಡತೆಗಳು ಬಂದು ಭೂಮಿಯನ್ನು ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವುದು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವುದನ್ನು ಮಿಡತೆಗಳು ತಿಂದುಬಿಡುತ್ತವೆ; ಹೊಲದಲ್ಲಿರುವ ಎಲ್ಲಾ ಮರಗಳ ಎಲೆಗಳನ್ನು ತಿಂದುಬಿಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಒಬ್ಬನು ಭೂಮಿಯನ್ನು ಕಾಣುವುದಕ್ಕಾಗದಷ್ಟು ಅವು ಭೂಮಿಯನ್ನೆಲ್ಲಾ ಮುಚ್ಚಿಕೊಳ್ಳುವುವು. ಇದಲ್ಲದೆ ಅವು ಆಲಿಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವುದೆಲ್ಲವನ್ನೂ, ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:5
7 ತಿಳಿವುಗಳ ಹೋಲಿಕೆ  

ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು.


ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ಹಾನಿಯಾಗಲಿಲ್ಲ.


ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.


ಅಪ್ಪಣೆಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರುವಂತೆ ಮಾಡುವೆನು.


ಆಗ ಯೆಹೋವನು ಮೋಶೆಗೆ, “ಐಗುಪ್ತ ದೇಶದ ಮೇಲೆ ನಿನ್ನ ಕೈಯನ್ನು ಚಾಚಿ, ಮಿಡತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ” ಎಂದು ಹೇಳಿದನು.


ಅವು ಭೂಮಿಯನ್ನೆಲ್ಲಾ ಮುಚ್ಚಿಕೊಂಡಿದ್ದರಿಂದ ನೆಲವು ಕಾಣದೇ ಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ, ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ಅವು ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.


ಅವುಗಳ ಮುಂದೆ ಬೆಂಕಿಯು ದಹಿಸುತ್ತದೆ, ಹಿಂದೆ ಜ್ವಾಲೆಯು ಧಗಧಗಿಸುತ್ತದೆ. ಅವು ಬರುವುದಕ್ಕೆ ಮೊದಲು ದೇಶವು ಏದೆನ್ ಉದ್ಯಾನದಂತೆ ಇತ್ತು, ಅವು ದಾಟಿಹೋದ ಮೇಲೆ ಬೆಗ್ಗಾಡಾಯಿತು. ಹೌದು, ಅವುಗಳಿಂದ ಯಾವುದೂ ತಪ್ಪಿಸಿಕೊಳ್ಳಲಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು