Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 11:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಐಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವುದು, ಅಂಥ ಗೋಳಾಟವು ಈವರೆಗೆ ದೇಶದಲ್ಲಿ ಎಂದೂ ಉಂಟಾಗಿರಲಿಲ್ಲ, ಮುಂದೆಯೂ ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಈಜಿಪ್ಟ್ ದೇಶದಲ್ಲೆಲ್ಲಾ ದೊಡ್ಡ ಗೋಳಾಟ ಉಂಟಾಗುವುದು. ಅಂಥ ಗೋಳಾಟ ಈವರೆಗೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆಗ ಐಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವದು; ಅಂಥ ಗೋಳಾಟ ಈವರೆಗೆ ಎಂದೂ ಆಗಿಲ್ಲ, ಮುಂದೆಯೂ ಆಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈಜಿಪ್ಟಿನಲ್ಲೆಲ್ಲಾ ದೊಡ್ಡ ಗೋಳಾಟ ಉಂಟಾಗುವುದು, ಅಂಥ ಗೋಳಾಟ ಈವರೆಗೂ ಆಗಿಲ್ಲ; ಮುಂದೆಯೂ ಆಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈಜಿಪ್ಟ್ ದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವುದು. ಅಂಥಾ ಗೋಳಾಟವು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 11:6
15 ತಿಳಿವುಗಳ ಹೋಲಿಕೆ  

ಆ ರಾತ್ರಿಯಲ್ಲಿ ಫರೋಹನೂ, ಅವನ ಪರಿವಾರದವರೂ, ಐಗುಪ್ತ್ಯರೆಲ್ಲರೂ ಎದ್ದು ನೋಡಲಾಗಿ ಸಾವಿಲ್ಲದ ಮನೆ ಒಂದೂ ಇರಲಿಲ್ಲ. ಐಗುಪ್ತ ದೇಶದಲ್ಲಿ ದೊಡ್ಡ ಗೋಳಾಟವಾಯಿತು.


ಎಲ್ಲಾ ದ್ರಾಕ್ಷಿಯ ತೋಟಗಳಲ್ಲಿ ರೋದನವಾಗುವುದು. ಏಕೆಂದರೆ ನಾನು ನಿಮ್ಮ ನಡುವೆ ಸಂಹಾರಕನಾಗಿ ಹಾದುಹೋಗುವೆನು” ಇದು ಯೆಹೋವನ ನುಡಿ.


ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.


ಅದೇ ದಿನದಲ್ಲಿ ಮೀನುಬಾಗಿಲಿನಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿನಿಂದ ಭೀಕರ ಶಬ್ದವನ್ನು ಕೇಳುವಿರಿ, ಅಂತು ದೊಡ್ಡ ಗದ್ದಲವಾಗುವುದು” ಇದು ಯೆಹೋವನ ನುಡಿ.


ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡುತ್ತಿಲ್ಲ.


ಯೆಹೋವನು ಇಂತೆನ್ನುತ್ತಾನೆ, “ರಾಮಾದಲ್ಲಿ ಬೊಬ್ಬೆಯು ಕೇಳಿಸುತ್ತದೆ, ಗೋಳಾಟವೂ ಮತ್ತು ಘೋರ ರೋದನವೂ ಉಂಟಾಗಿವೆ; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅತ್ತತ್ತು ಅವರು ಇಲ್ಲದೆ ಹೋದದ್ದಕ್ಕಾಗಿ ಸಮಾಧಾನ ಹೊಂದದೆ ಇದ್ದಾಳೆ.”


ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲಯಿಮಿನವರೆಗೂ, ಬೆಯೇರ್ ಏಲೀಮಿನ ಪರ್ಯಂತರವೂ ವ್ಯಾಪಿಸಿದೆ.


ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಆದರೆ ಐಗುಪ್ತ್ಯರಿಗೂ, ಇಸ್ರಾಯೇಲರಿಗೂ ಯೆಹೋವನು ವ್ಯತ್ಯಾಸಮಾಡಿದ್ದಾನೆಂಬುದು ನಿಮಗೆ ತಿಳಿಯುವಂತೆ ಇಸ್ರಾಯೇಲರಲ್ಲಿರುವ ಮನುಷ್ಯರ ಎದುರಿಗಾಗಲಿ, ಪಶುಗಳ ಎದುರಿಗಾಗಲಿ ಒಂದು ನಾಯಿಯಾದರೂ ಬೊಗಳುವುದಿಲ್ಲ’


ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ.


ಆ ದಿನದಲ್ಲಿ, ಐಗುಪ್ತ್ಯರು ಅಶ್ರಯವಿಲ್ಲದ ಹೆಂಗಸರ ಹಾಗೆ ಭಯಗ್ರಸ್ತರಾಗಿರುವರು. ಸೇನಾಧೀಶ್ವರನಾದ ಯೆಹೋವನು ಅವರ ಮೇಲೆ ತನ್ನ ಕೈಯನ್ನು ಬೀಸುತ್ತಿರುವುದರಿಂದ ಅವರು ಭಯಪಟ್ಟು ನಡುಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು