Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ, ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು. ಇದು ಶಾಶ್ವತವಾದ ನಿಯಮವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹುಳಿರಹಿತ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ನೀವು ಆಚರಿಸಬೇಕು. ಏಕೆಂದರೆ ಆ ದಿನದಲ್ಲೇ ನಾನು ನಿಮ್ಮ ಪಾಳೆಯದವರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದದ್ದು . ನೀವೂ ನಿಮ್ಮ ಸಂತತಿಯವರೂ ಆ ದಿನವನ್ನು ಆಚರಣೆಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು; ಇದು ಶಾಶ್ವತವಾದ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲೇಬೇಕು. ಯಾಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಎಲ್ಲಾ ಜನರ ಗುಂಪುಗಳನ್ನು ಈಜಿಪ್ಟಿನಿಂದ ಬಿಡಿಸಿ ಕರೆದುಕೊಂಡು ಹೋದೆನು. ಆದ್ದರಿಂದ ನಿಮ್ಮ ಸಂತತಿಯವರೆಲ್ಲರೂ ಆ ದಿನವನ್ನು ಜ್ಞಾಪಕಮಾಡಿಕೊಳ್ಳಬೇಕು. ಇದು ಶಾಶ್ವತವಾದ ಕಟ್ಟಳೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ್ದೇನೆ. ಆದಕಾರಣ ನಿಮ್ಮ ಸಂತತಿಗಳಲ್ಲಿ ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:17
12 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಐಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಈ ಆಚರಣೆಯನ್ನು ಆಚರಿಸುತ್ತೇವೆ.


ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.


ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.


ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಅಂದನು.


ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.


ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಐಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.


ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವೆಂದು ಆಚರಿಸಬೇಕು.


ಹೀಗಿರುವುದರಿಂದ ಪ್ರತಿವರ್ಷವು ನಿಯಮಿತವಾದ ಕಾಲದಲ್ಲಿ ನೀವು ಈ ಆಚರಣೆಯನ್ನು ಮಾಡಬೇಕು.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ?


ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು