Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹಿಸ್ಸೋಪ್ ಗಿಡದ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿಲಿನ ಮೇಲಿನ ಅಡ್ಡಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವುಪಟ್ಟಿಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೊರಗೆ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹಿಸ್ಸೋಪ್ ಗಿಡದ ಕುಚ್ಚನ್ನು ಬಟ್ಟಲಿನಲ್ಲಿರುವ ಆ ರಕ್ತದಲ್ಲಿ ಅದ್ದಿ ಬಾಗಿಲಿನ ಪಟ್ಟಿಗೂ ಅದರ ನಿಲುವು ಕಂಬಗಳೆರಡಕ್ಕೂ ಹಚ್ಚಿರಿ. ಬಳಿಕ ನಿಮ್ಮಲ್ಲಿ ಒಬ್ಬರೂ ಸೂರ್ಯೋದಯದವರೆಗೆ ಬಾಗಿಲಿನಿಂದ ಹೊರಗೆ ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಬಟ್ಟಲಿನಲ್ಲಿರುವ ಆ ರಕ್ತದಲ್ಲಿ ಅದ್ದಿ ಬಾಗಲಿನ ಮೇಲಣ ಪಟ್ಟಿಗೂ ಎರಡು ನಿಲುವುಕಂಬಗಳಿಗೂ ಹಚ್ಚಬೇಕು. ತರುವಾಯ ನಿಮ್ಮಲ್ಲಿ ಒಬ್ಬರೂ ಸೂರ್ಯೋದಯದೊಳಗಾಗಿ ಬಾಗಲಿನಿಂದ ಹೊರಗೆ ಹೋಗಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ರಕ್ತ ತುಂಬಿರುವ ಪಾತ್ರೆಯಲ್ಲಿ ಅದ್ದಿರಿ. ರಕ್ತವನ್ನು ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿರಿ. ಮುಂಜಾನೆಯಾಗುವವರೆಗೆ ಯಾರೂ ತಮ್ಮ ಮನೆಯನ್ನು ಬಿಟ್ಟು ಹೊರಗೆ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹಿಸ್ಸೋಪ ಗಿಡದ ಕಟ್ಟನ್ನು ತೆಗೆದುಕೊಂಡು, ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ, ಬಾಗಿಲಿನ ಮೇಲೆ ಅಡ್ಡ ಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವು ಕಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟುಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:22
13 ತಿಳಿವುಗಳ ಹೋಲಿಕೆ  

ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.


ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಬರಲಿಂದ ಮನುಷ್ಯನು ಸತ್ತ ಆ ಡೇರೆಯ ಮೇಲೆಯೂ, ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೆಯೂ ಚಿಮಿಕಿಸಬೇಕು. ಹಾಗೆಯೇ ಎಲುಬಾಗಲಿ, ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾವನಿಗೆ ಸೋಂಕುವುದೋ ಅವನ ಮೇಲೆಯೂ ನೀರನ್ನು ಚಿಮಿಕಿಸಬೇಕು.


ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.


ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ ದೇವಾಲಯವಿತ್ತು.


ಅವರು ಅವುಗಳ ರಕ್ತದಲ್ಲಿ ಸ್ವಲ್ಪವನ್ನು ತೆಗೆದು ತಾವು ಆ ಭೋಜನವನ್ನು ಮಾಡುವ ಮನೆಬಾಗಿಲಿನ ಎರಡು ನಿಲುವುಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಬಳಿಕ ಅವರು ಕೀರ್ತನೆಯನ್ನು ಹಾಡಿದ ಮೇಲೆ ಎಣ್ಣೆಯ ಮರಗಳ ಗುಡ್ಡಕ್ಕೆ ಹೊರಟು ಹೋದರು.


ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.


ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು; ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈ ಮಾಡಿದ್ದಾದರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲೆ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು