Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಐಗುಪ್ತ್ಯರನ್ನು ಹತಮಾಡುವುದಕ್ಕೆ ದೇಶದ ನಡುವೆ ಹಾದುಹೋಗುವನು. ಆಗ ನಿಮ್ಮ ನಿಮ್ಮ ಮನೆಬಾಗಿಲಿನ ಮೇಲಣ ಪಟ್ಟಿಯಲ್ಲಿಯೂ, ಎರಡು ನಿಲುವು ಪಟ್ಟಿಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿ ಹೋಗುವನು. ನಿಮ್ಮ ಪ್ರಾಣ ತೆಗೆಯುವುದಕ್ಕೆ ಸಂಹಾರಕನು ನಿಮ್ಮ ಮನೆಗಳಲ್ಲಿ ಬರುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ ಈಜಿಪ್ಟಿನವರನ್ನು ವಧಿಸಲು ಆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೆಬಾಗಲಿನ ಮೇಲ್ಪಟ್ಟಿಯಲ್ಲೂ ಹಾಗೂ ಎರಡು ನಿಲುವು ಕಂಬಗಳಲ್ಲೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವರು. ನಿಮ್ಮನ್ನು ವಧಿಸಲು ವಿನಾಶಕನನ್ನು ನಿಮ್ಮ ಮನೆಗಳಿಗೆ ಅವರು ಬರಗೊಡಿಸುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಐಗುಪ್ತ್ಯರನ್ನು ಹತಮಾಡುವದಕ್ಕೆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೇಬಾಗಲಿನ ಮೇಲಣ ಪಟ್ಟಿಯಲ್ಲಿಯೂ ಎರಡು ನಿಲುವು ಕಂಬಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವನು. ನಿಮ್ಮ ಪ್ರಾಣ ತೆಗೆಯುವದಕ್ಕೆ ಸಂಹಾರಕನನ್ನು ನಿಮ್ಮ ಮನೆಗಳಲ್ಲಿ ಬರಗೊಡಿಸುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆ ಸಮಯದಲ್ಲಿ ಚೊಚ್ಚಲಾದವುಗಳನ್ನು ಸಂಹರಿಸಲು ಯೆಹೋವನು ಈಜಿಪ್ಟಿನ ಮೂಲಕ ಹಾದುಹೋಗುವನು. ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿದ ರಕ್ತವನ್ನು ಯೆಹೋವನು ನೋಡಿ ಆ ಮನೆಯನ್ನು ಸಂರಕ್ಷಿಸುವನು. ಸಂಹಾರಕನು ನಿಮ್ಮ ಮನೆಯೊಳಗೆ ಬಂದು ಸಂಹರಿಸಲು ಯೆಹೋವನು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ಯೆಹೋವ ದೇವರು ಈಜಿಪ್ಟಿನವರನ್ನು ಸಂಹರಿಸುವುದಕ್ಕಾಗಿ ಹಾದುಹೋಗುವರು. ಅವರು ಅಡ್ಡ ಪಟ್ಟಿಯ ಮೇಲೂ, ಅದರ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ, ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡದಂತೆ, ಯೆಹೋವ ದೇವರು ನಿಮ್ಮ ಬಾಗಿಲುಗಳನ್ನು ದಾಟಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:23
14 ತಿಳಿವುಗಳ ಹೋಲಿಕೆ  

ಭೂಮಿಯ ಮೇಲಿರುವ ಹುಲ್ಲನ್ನಾಗಲಿ ಯಾವ ಹಣ್ಣು ತರಕಾರಿಗಳನ್ನಾಗಲಿ, ಮರವನ್ನಾಗಲಿ ನಾಶಮಾಡದೆ, ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ನಾಶಮಾಡಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.


“ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.


ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು.


ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.


ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.


ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.


ಆಗ ಮೋಶೆ ಫರೋಹನಿಗೆ, “ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು.


ಅವರು ಅವುಗಳ ರಕ್ತದಲ್ಲಿ ಸ್ವಲ್ಪವನ್ನು ತೆಗೆದು ತಾವು ಆ ಭೋಜನವನ್ನು ಮಾಡುವ ಮನೆಬಾಗಿಲಿನ ಎರಡು ನಿಲುವುಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.


ನನ್ನ ಜನರೇ, ಬನ್ನಿರಿ, ನಿಮ್ಮ ನಿಮ್ಮ ಕೋಣೆಗಳಲ್ಲಿ ಸೇರಿಕೊಂಡು ಬಾಗಿಲುಗಳನ್ನು ಮುಚ್ಚಿಕೊಳ್ಳಿರಿ; ದೈವರೋಷವು ತೀರುವ ತನಕ ಒಂದು ಕ್ಷಣ ಅವಿತುಕೊಳ್ಳಿರಿ.


ನಿನ್ನ ಕೋಪವು ಇಳಿಯುವ ವರೆಗೆ ನನ್ನನ್ನು ಮರೆಮಾಡಿ, ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು, ನನಗೆ ಅವಧಿಯನ್ನು ಗೊತ್ತುಮಾಡಿ ಕಡೆಯಲ್ಲಿ ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು