Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೆಹೋವನು ಅವರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದ್ದರಿಂದ ಅವರು ಕೇಳಿಕೊಂಡದ್ದೆಲ್ಲವನ್ನು ಐಗುಪ್ತರು ಕೊಟ್ಟರು. ಹೀಗೆ ಇಸ್ರಾಯೇಲರು ಐಗುಪ್ತ್ಯರ ಸೊತ್ತನ್ನು ಸುಲಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಇಸ್ರಯೇಲರ ಮೇಲೆ ಈಜಿಪ್ಟಿನವರಿಗೆ ದಯೆ ಹುಟ್ಟುವಂತೆ ಮಾಡಿದ್ದರು ಸರ್ವೇಶ್ವರ. ಆದ್ದರಿಂದ ಅವರು ಕೇಳಿಕೊಂಡದ್ದನ್ನು ಈಜಿಪ್ಟಿನವರು ಕೊಟ್ಟುಬಿಟ್ಟರು. ಹೀಗೆ ಇಸ್ರಯೇಲರು ಈಜಿಪ್ಟಿನವರ ಸೊತ್ತನ್ನು ಸುಲಿಗೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೆಹೋವನು ಅವರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದ್ದರಿಂದ ಅವರು ಕೇಳಿಕೊಂಡದ್ದನ್ನು ಕೊಟ್ಟರು. ಹೀಗೆ ಇಸ್ರಾಯೇಲ್ಯರು ಐಗುಪ್ತ್ಯರ ಸೊತ್ತನ್ನು ಸುಲುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಈಜಿಪ್ಟಿನವರು ಇಸ್ರೇಲರಿಗೆ ದಯೆ ತೋರಿಸುವಂತೆ ಯೆಹೋವನು ಪ್ರೇರೇಪಿಸಿದ್ದರಿಂದ ಈಜಿಪ್ಟಿನವರು ತಮ್ಮ ಸ್ವತ್ತುಗಳನ್ನು ಇಸ್ರೇಲರಿಗೆ ಕೊಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯೆಹೋವ ದೇವರು ಈಜಿಪ್ಟಿನವರ ಎದುರಿನಲ್ಲಿ ಜನರ ಮೇಲೆ ದಯೆ ತೋರಿಸಿದ್ದರಿಂದ, ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಈಜಿಪ್ಟಿನವರ ಸೊತ್ತನ್ನು ಸುಲಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:36
11 ತಿಳಿವುಗಳ ಹೋಲಿಕೆ  

ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.


ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.


ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ, ದಯೆಯನ್ನೂ ಹುಟ್ಟಿಸಿದನು.


ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ.


ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು.


ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.


ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.


ಆದುದರಿಂದ ಸ್ತ್ರೀಪುರುಷರೆಲ್ಲರೂ ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬುದಾಗಿ ಜನರಿಗೆ ಸ್ಪಷ್ಟವಾಗಿ ಹೇಳು” ಎಂದನು.


ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು