Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನದ ಸಂಜೆವೇಳೆಯಲ್ಲಿ ಇಸ್ರಯೇಲ್ ಸಮಾಜದವರೆಲ್ಲರು ತಮ್ಮ ತಮ್ಮ ಕೂಟಗಳಲ್ಲಿ ಕೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನದ ಸಂಜೇ ವೇಳೆಯಲ್ಲಿ ಇಸ್ರಾಯೇಲ್ಯರ ಸಮೂಹದವರೆಲ್ಲರು ತಮ್ಮ ತಮ್ಮ ಕೂಟಗಳಲ್ಲಿ ಕೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಆ ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಆ ಪಶುಗಳನ್ನು ಕೊಯ್ಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಳ್ಳಬೇಕು. ತರುವಾಯ ಸಂಜೆಯಲ್ಲಿ ಇಸ್ರಾಯೇಲಿನ ಜನಾಂಗದವರೆಲ್ಲರೂ ಅವುಗಳನ್ನು ವಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:6
34 ತಿಳಿವುಗಳ ಹೋಲಿಕೆ  

“‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಯೆಹೋವನು ನೇಮಿಸಿದ ಪಸ್ಕ ಹಬ್ಬವನ್ನು ಆಚರಿಸಬೇಕು.


“‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇಮಿಸಿದ ಹಬ್ಬವಾಗಬೇಕು.


ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು.


ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಮೊದಲುಗೊಂಡು ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.


ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,


“ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿನದಲ್ಲಿ, ಏಳು ದಿನದ ಪಸ್ಕಹಬ್ಬವನ್ನು ಆಚರಿಸಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.


“ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.


ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು.


ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಆತನನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋಗಿ,


ಆತನನ್ನು ಶಿಲುಬೆಗೆ ಹಾಕುವಾಗ ಬೆಳಿಗ್ಗೆ ಒಂಭತ್ತು ಗಂಟೆಯಾಗಿತ್ತು.


ಆದರೆ ಮುಖ್ಯಯಾಜಕರು, ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಿರಿ ಎಂಬುದಾಗಿ ಜನರನ್ನು ಪ್ರೇರೇಪಿಸಿದರು.


ಜನರು ಪಿಲಾತನ ಬಳಿಗೆ ಹೋಗಿ, ನೀನು ನಮಗೆ ಮಾಡುತ್ತಾ ಬಂದ ಪದ್ಧತಿಯ ಪ್ರಕಾರ ಮಾಡು ಎಂದು ಕೇಳಿಕೊಳ್ಳುತ್ತಿದ್ದರು.


ಬೆಳಗಾದ ಕೂಡಲೆ ಮುಖ್ಯಯಾಜಕರೂ, ಹಿರಿಯರೂ, ಶಾಸ್ತ್ರಿಗಳೂ, ಹಿರೀಸಭೆಯ ಸದಸ್ಯರೆಲ್ಲರೂ ಒಟ್ಟುಗೂಡಿ ಆಲೋಚನೆ ಮಾಡಿಕೊಂಡು ಯೇಸುವನ್ನು ಕಟ್ಟಿಸಿ ಕರೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿದರು.


ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.


ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.


ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.


ನೀವು ಪರಿಶುದ್ಧನೂ, ನೀತಿವಂತನೂ ಆಗಿರುವ ಯೇಸುವನ್ನು ಬೇಡವೆಂದು ಹೇಳಿ ಕೊಲೆಗಾರನಾದ ಒಬ್ಬನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವದಾಯಕನಾದ ಕ್ರಿಸ್ತನನ್ನು ಕೊಲ್ಲಿಸಿದ್ದೀರಿ.


ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ, ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು. ಇದು ಶಾಶ್ವತವಾದ ನಿಯಮವಾಗಿದೆ.


ಇಸ್ರಾಯೇಲರ ಸಮೂಹದವರೆಲ್ಲರೂ ಈ ಹಬ್ಬವನ್ನು ಆಚರಿಸಬೇಕು.


ಇಸ್ರಾಯೇಲರ ಸಮೂಹವೆಲ್ಲಾ ಏಲೀಮಿನಿಂದ ಪ್ರಯಾಣ ಮಾಡಿ ಅವರು ಐಗುಪ್ತ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಎಲೀಮಿಗೂ ಸೀನಾಯಿ ಬೆಟ್ಟಕ್ಕೂ ನಡುವೆಯಿರುವ ಸೀನ್ ಎಂಬ ಮರುಭೂಮಿಗೆ ಬಂದರು.


ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.


ಯೋಷೀಯನು ಯೆಹೋವನಿಗೋಸ್ಕರ ಯೆರೂಸಲೇಮಿನಲ್ಲಿ ಪಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕದ ಕುರಿಗಳನ್ನು ಕೊಯ್ದರು.


ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಸ್ಕವನ್ನು ಆಚರಿಸಿದರು.


ಅವುಗಳಲ್ಲಿ ಒಂದನ್ನು ಉದಯಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.


ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಭೋಜನ ನೈವೇದ್ಯವನ್ನೂ, ಪಾನದ್ರವ್ಯವನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯ ಹೋಮವಾಗಿರುವುದು.


ಇಸ್ರಾಯೇಲ್ಯರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಯೆರಿಕೋವಿನ ಬೈಲಿನಲ್ಲಿ ಪಸ್ಕಹಬ್ಬವನ್ನು ಆಚರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು