Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಈ ಸಂದೇಶವನ್ನು ನೀವು ನೆನಪಿನಲ್ಲಿಡಬೇಕು. ಇದಕ್ಕೆ ಈ ಪದ್ಧತಿಯು ನಿಮ್ಮ ಕೈಗೆ ಕಟ್ಟಿದ ಕಂಕಣದಂತಿರುತ್ತದೆ, ಹಣೆಗೆ ಕಟ್ಟಿದ ಜ್ಞಾಪಕಪಟ್ಟಿಯಂತಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಭುಜಬಲದಿಂದ ನಮ್ಮನ್ನು ಐಗುಪ್ತದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವದಕ್ಕೆ ಈ ಪದ್ಧತಿಯು ಕೈಗೆ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇದು ನಿಮ್ಮ ಕೈಗೆ ದಾರ ಕಟ್ಟಿದಂತಿರುತ್ತದೆ; ನಿಮ್ಮ ಕಣ್ಣುಗಳ ಮುಂದೆ ಒಂದು ಚಿಹ್ನೆಯಂತೆ ಇರುತ್ತದೆ. ಯೆಹೋವನು ತನ್ನ ಮಹಾಶಕ್ತಿಯಿಂದ ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನೆಂಬುದನ್ನು ಜ್ಞಾಪಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯ ಮೇಲೆ ಸಂಕೇತವಾಗಿಯೂ ಇರಲಿ. ಏಕೆಂದರೆ ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ ಎಂದು ಹೇಳಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:16
18 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.


ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.


ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.


ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.


ಆತನು ತನ್ನ ಭುಜಬಲವನ್ನೂ, ಶಿಕ್ಷಾಹಸ್ತವನ್ನೂ, ಮಹಾಭೀತಿಗಳನ್ನೂ, ಮಹತ್ಕಾರ್ಯಗಳನ್ನೂ ಮತ್ತು ಸೂಚಕಕಾರ್ಯಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದನು.


ಆದರೆ ನೀವು ಇರುವ ಎಲ್ಲಾ ಮನೆಗಳ ಬಾಗಿಲಿಗೆ ಹಚ್ಚಿರುವ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ ನಿಮಗೆ ಯಾವ ನಷ್ಟವನ್ನೂ ಮಾಡದೇ ಮುಂದಕ್ಕೆ ದಾಟಿಹೋಗುವೆನು. ನಾನು ಐಗುಪ್ತ್ಯದವರನ್ನು ಸಂಹರಿಸುವಾಗ ನಿಮಗೆ ಯಾವ ಹಾನಿಯೂ ಉಂಟಾಗುವುದಿಲ್ಲ.


“ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.


ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.


ಆದುದರಿಂದ, ನೀನು ಇಸ್ರಾಯೇಲರಿಗೆ ನನ್ನ ಹೆಸರಿನಲ್ಲಿ ಹೇಳಬೇಕಾದದ್ದೇನೆಂದರೆ, ‘ನಾನೇ ಯೆಹೋವನು ಐಗುಪ್ತರು ನಿಮ್ಮಿಂದ ಮಾಡಿಸುವ ಬಿಟ್ಟೀ ಕೆಲಸಗಳನ್ನು ತಪ್ಪಿಸಿ, ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ, ನನ್ನ ಕೈಚಾಚಿ ಅವರಿಗೆ ಮಹಾ ಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.


ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್‍ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.


ನೀವು ಅವರಿಗೆ, “ನಾವು ಐಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆಮಾಡಿದನು.


ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.


“ಅವರು ನಿನ್ನ ಸೇವಕರೂ, ನೀನು ನಿನ್ನ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ.


ಇಸ್ರಾಯೇಲರನ್ನು ಅವರ ಮಧ್ಯದಿಂದ ಹೊರಗೆ ತಂದನು, ಆತನ ಪ್ರೀತಿಯು ಶಾಶ್ವತವಾದದ್ದು.


ಅವುಗಳನ್ನು ಸದಾ ನಿನ್ನ ಹೃದಯದಲ್ಲಿ ಇಟ್ಟುಕೋ, ನಿನ್ನ ಕೊರಳಿಗೆ ಅವುಗಳನ್ನು ಧರಿಸಿಕೋ.


ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು