Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ಈಜಿಪ್ಟಿನವರ ಹೃದಯಗಳನ್ನು ಕಠಿಣಪಡಿಸುವೆನು, ಎಂದೇ ಅವರು ಇವರ ಹಿಂದೆ ಸಮುದ್ರದೊಳಕ್ಕೆ ಹೋಗುವರು. ಆಗ, ನಾನು ಫರೋಹನ್ನು ಅವನ ಸಮಸ್ತ ಸೈನ್ಯವನ್ನೂ, ರಥಗಳನ್ನೂ ಹಾಗು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನಾದದರಿಂದ ಅವರು ಇವರ ಹಿಂದೆ ಸಮುದ್ರದೊಳಗೆ ಹೋಗುವರು; ಆಗ ನಾನು ಫರೋಹನಲ್ಲಿಯೂ ಅವನ ಸಮಸ್ತ ಸೈನ್ಯದಲ್ಲಿಯೂ ರಥಗಳಲ್ಲಿಯೂ ಕುದುರೆಗಳಲ್ಲಿಯೂ ಪ್ರಖ್ಯಾತಿಗೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈಜಿಪ್ಟಿನವರು ನಿಮ್ಮನ್ನು ಬೆನ್ನಟ್ಟುವಂತೆ ನಾನು ಅವರ ಹೃದಯಗಳನ್ನು ಕಠಿಣಗೊಳಿಸುವುದರಿಂದ ನಾನು ಫರೋಹನಿಗಿಂತಲೂ ಅವನ ಎಲ್ಲಾ ರಾಹುತರುಗಳಿಗಿಂತಲೂ ರಥಗಳಿಗಿಂತಲೂ ಶಕ್ತಿಶಾಲಿ ಎಂಬುದನ್ನು ನಿಮಗೆ ತೋರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ಈಜಿಪ್ಟಿನವರ ಹೃದಯವನ್ನು ಕಠಿಣ ಮಾಡುತ್ತೇನೆ. ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:17
26 ತಿಳಿವುಗಳ ಹೋಲಿಕೆ  

ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.


“‘ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ, ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುತ್ತೇನೆ.


“‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.


ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.


‘ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ, ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾನೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.


ಆದುದರಿಂದ ಯೆರೂಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು ಇದು ಕರ್ತನಾದ ಯೆಹೋವನ ನುಡಿ.


ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?


ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು.


ನಾನು ಎಫ್ರಾಯೀಮಿಗೆ ಸಿಂಹವೂ, ಯೆಹೂದ ಕುಲಕ್ಕೆ ಪ್ರಾಯದ ಸಿಂಹವೂ ಆಗುವೆನು; ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಯಾರೂ ಬಿಡಿಸರು.


ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.


ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.


ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು.


ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.


“ಕೇಳಿರಿ ನಾನು ನಿಮ್ಮೊಂದಿಗೂ, ನಿಮ್ಮ ತರುವಾಯ ನಿಮ್ಮ ಸಂತತಿಯವರೊಂದಿಗೂ, ಒಡಂಬಡಿಕೆ ಮಾಡಿಕೊಳ್ಳುವೆನು.


ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.


ದೇವರು ಯಾರನ್ನು ಕರುಣಿಸಿದರೋ, ಯಾರನ್ನು ಕಠಿಣಪಡಿಸಿದರೋ ಅದೆಲ್ಲವೂ ಆತನ ಇಷ್ಟಾನುಸಾರವಾಗಿಯೇ ಇದೆ ಎಂಬುದು ಇದರಿಂದ ತೋರಿಬರುತ್ತದೆ.


ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ, ರಥಗಳೂ, ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಬಂದರು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.


ಐಗುಪ್ತರಂತೆಯೂ ಫರೋಹನಂತೆಯೂ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳುವುದೇಕೆ? ಇಸ್ರಾಯೇಲ್ಯರನ್ನು ಕಳುಹಿಸಲೊಲ್ಲದ ಇವರನ್ನು ಯೆಹೋವನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲಾ.


ಇದಲ್ಲದೆ ಅವನ ಸಂಗಡ ರಥಗಳೂ, ಕುದುರೆಗಳೂ ಸಹ ಹೋದವು. ಯೋಸೇಫನ ಹಿಂದೆ ಹೊರಟು ಹೋದವರು ಬಹು ಮಂದಿಯಾಗಿದ್ದರು.


ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.


ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ’” ಅಂದಳು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಚೀದೋನೇ, ನಾನು ನಿನ್ನ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣದಲ್ಲಿ ನ್ಯಾಯ ತೀರಿಸಿ, ನಾನು ಮಹಿಮೆಯನ್ನು ಹೊಂದುವಾಗ ನಾನೇ ಯೆಹೋವನು’ ಎಂದು ಎಲ್ಲರಿಗೂ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು