Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಸ್ರಯೇಲರು ಅದನ್ನು ಕಂಡು ಇಂಥದೆಂದು ತಿಳಿಯದೆ ಒಬ್ಬರಿಗೊಬ್ಬರು ‘ಮನ್ನ’ ಎಂದರು. ಇದೇನಿರಬಹುದೆಂದು ವಿಚಾರಿಸಿದರು ಮೋಶೆ ಅವರಿಗೆ, “ಇದು ಸರ್ವೇಶ್ವರ ಸ್ವಾಮಿ ನಿಮಗೋಸ್ಕರ ಕೊಟ್ಟ ಆಹಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಸ್ರಾಯೇಲ್ಯರು ಅದನ್ನು ಕಂಡು ಇಂಥದೆಂದು ತಿಳಿಯದೆ ಒಬ್ಬರಿಗೊಬ್ಬರು ಇದೇನಿರಬಹುದು ಎಂದು ಹೇಳಿಕೊಂಡರು. ಮೋಶೆ ಅವರಿಗೆ - ಇದು ಯೆಹೋವನು ನಿಮಗೋಸ್ಕರ ಕೊಟ್ಟ ಆಹಾರವು; ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇಸ್ರೇಲರು ಅದನ್ನು ನೋಡಿ “ಏನದು” ಎಂಬುದಾಗಿ ಒಬ್ಬರನ್ನೊಬ್ಬರು ಕೇಳಿದರು. ಅದು ಏನೆಂದು ಅವರಿಗೆ ಗೊತ್ತಿಲ್ಲದ ಕಾರಣ ಅವರು ಈ ಪ್ರಶ್ನೆಯನ್ನು ಕೇಳಿದರು. ಆದ್ದರಿಂದ ಮೋಶೆ ಅವರಿಗೆ, “ಇದು ಯೆಹೋವನು ನಿಮಗೆ ಕೊಟ್ಟಿರುವ ಆಹಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಸ್ರಾಯೇಲರು ಅದನ್ನು ನೋಡಿದಾಗ ಅವರು, ಒಬ್ಬರಿಗೊಬ್ಬರು, “ಇದೇನು?” ಎಂದರು. ಏಕೆಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ, “ಯೆಹೋವ ದೇವರು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:15
19 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಮೋಶೆಗೆ, “ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ.


ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು.


ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.


ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.


ಅವರೆಲ್ಲರೂ ಆತ್ಮೀಕವಾದ ಒಂದೇ ಆಹಾರವನ್ನು ತಿಂದರು.


ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ.


ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.


ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರುಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರ್ಷವೆಲ್ಲ ಕಾನಾನ್ ದೇಶದ ಉತ್ಪನ್ನವನ್ನೇ ಅನುಭವಿಸಿದರು.


ನಿಮ್ಮ ಪೂರ್ವಿಕರು ಅಡವಿಯಲ್ಲಿ ಮನ್ನಾ ತಿಂದರೂ ಸತ್ತು ಹೋದರು.


ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು


ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.


ಆದಕಾರಣ ಮೋಶೆಯು ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು, ಅದರಲ್ಲಿ ಒಂದು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡಬೇಕು” ಎಂದು ಹೇಳಿದನು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.


ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.


ಇವೆಲ್ಲವುಗಳ ಕುರಿತು ಇಹಲೋಕದ ಜನಗಳು ಅಲೆದಾಡುತ್ತಾರೆ. ಇವು ನಿಮಗೆ ಅವಶ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.


ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.


ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು.


ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯ ಆಹಾರದಿಂದ ಅವರನ್ನು ತೃಪ್ತಿಗೊಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು