Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದಕ್ಕೆ ಮೋಶೆ, “ಇದು ಸರ್ವೇಶ್ವರ ಹೇಳಿದ ಮಾತು. ನಾಳೆ ವಿಶ್ರಾಂತಿಯ ದಿನ, ಸರ್ವೇಶ್ವರನ ಪರಿಶುದ್ಧ ‘ಸಬ್ಬತ್’ ದಿನ. ಆಹಾರಕ್ಕೆ ಸುಡಬೇಕಾದುದನ್ನು ಸುಟ್ಟು, ಬೇಯಿಸಬೇಕಾದುದನ್ನು ಬೇಯಿಸಿದ ನಂತರ ಮಿಕ್ಕಿದ್ದನ್ನು ನಾಳೆಯ ತನಕ ಇಟ್ಟುಕೊಳ್ಳಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದಕ್ಕೆ ಅವನು - ಇದು ಯೆಹೋವನು ಹೇಳಿದ ಮಾತು; ನಾಳೆ ವಿರಾಮಮಾಡಿಕೊಳ್ಳತಕ್ಕ ಯೆಹೋವನ ಪರಿಶುದ್ಧ ಸಬ್ಬತ್ ದಿನವಾಗಿದೆ. [ಈ ಹೊತ್ತಿಗೆ] ಸುಡಬೇಕಾದದ್ದನ್ನು ಸುಟ್ಟು ಬೇಯಿಸಬೇಕಾದದ್ದನ್ನು ಬೇಯಿಸಿದ ನಂತರ ವಿುಕ್ಕದ್ದನ್ನು ನಾಳೆಯ ತನಕ ಇಟ್ಟುಕೊಳ್ಳಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮೋಶೆಯು ಅವರಿಗೆ, “ಯೆಹೋವನೇ ಇದರ ಬಗ್ಗೆ ತಿಳಿಸಿದ್ದನು. ನಾಳೆ ಮುಂಜಾನೆ ಯೆಹೋವನನ್ನು ಸನ್ಮಾನಿಸತಕ್ಕ ವಿಶೇಷ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆದ್ದರಿಂದ ಇದು ಹೀಗೆ ಸಂಭವಿಸಿತು. ಈ ದಿನಕ್ಕೆ ಬೇಕಾದ ಅಡಿಗೆಯನ್ನು ನೀವು ತಯಾರಿಸಿಕೊಳ್ಳಿರಿ. ಆದರೆ ಈ ಆಹಾರದಲ್ಲಿ ಉಳಿದದ್ದನ್ನು ನಾಳೆ ಪ್ರಾತಃಕಾಲಕ್ಕಾಗಿ ಉಳಿಸಿಕೊಳ್ಳಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅದಕ್ಕೆ ಮೋಶೆ, “ಯೆಹೋವ ದೇವರು ಆಜ್ಞಾಪಿಸಿದ ಮಾತು ಇದೇ: ‘ನಾಳೆ ಯೆಹೋವ ದೇವರಿಗೆ ಪರಿಶುದ್ಧ ಸಬ್ಬತ್ ದಿನವಾಗಿದೆ. ಇಂದೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನವರೆಗೆ ಇಟ್ಟುಕೊಳ್ಳಿರಿ,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:23
16 ತಿಳಿವುಗಳ ಹೋಲಿಕೆ  

“‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.


ಆರು ದಿನಗಳು ಕೆಲಸ ಮಾಡಬೇಕು. ಏಳನೆಯ ದಿನ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ. ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು.


ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.


ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.


ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.


ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.


ಅದಲ್ಲದೆ ಮೋಶೆ ಅವರಿಗೆ, “ಇದನ್ನು ಯಾರೂ ಮರು ದಿನದವರೆಗೆ ಇಟ್ಟುಕೊಳ್ಳಬಾರದು” ಎಂದು ಹೇಳಿದನು.


“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್‍ ದಿನವನ್ನು ದೇವರ ದಿನವೆಂದು ಆಚರಿಸಬೇಕು.


ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತನಾಡಿ, ಅವರಿಗೆ ನೀತಿನಿಯಮಗಳನ್ನೂ, ಯಥಾರ್ಥ ಧರ್ಮೋಪದೇಶವನ್ನೂ, ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದೆ.


ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ, ಆಜ್ಞಾವಿಧಿನಿಯಮಗಳನ್ನೂ ಅವರಿಗೆ ಕಲಿಸಿದೆ.


ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.


ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು