Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಮೋಶೆಯು ಜನರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದೇ, ‘ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಮೋಶೆ ಜನರಿಗೆ, “ಸರ್ವೇಶ್ವರ ಸ್ವಾಮಿ ಇದರ ವಿಷಯದಲ್ಲಿ ಕೊಟ್ಟ ಆಜ್ಞೆ ಇದು: ‘ನೀವು ಒಂದು ಹೋಮೆರ್ ತುಂಬ ಮನ್ನವನ್ನು ಇಟ್ಟುಕೊಳ್ಳಬೇಕು. ಏಕೆಂದರೆ ನಾನು ಈಜಿಪ್ಟಿನಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಈ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗೋಸ್ಕರ ಇದನ್ನು ಇಟ್ಟುಕೊಳ್ಳಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಮೋಶೆಯು ಜನರಿಗೆ - ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನಂದರೆ - ನಾನು ಐಗುಪ್ತದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಅರಣ್ಯದಲ್ಲಿ ತಿನ್ನುವದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗೋಸ್ಕರ ನೀವು ಒಂದು ಗೋಮೆರ್ ತುಂಬಾ ಮನ್ನವನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಮೋಶೆಯು, “ಯೆಹೋವನು ಆಜ್ಞಾಪಿಸಿದ್ದೇನೆಂದರೆ, ‘ಮೂರು ಸೇರಿನಷ್ಟು ಮನ್ನವನ್ನು ನಿಮ್ಮ ಮುಂದಿನ ಸಂತತಿಯವರಿಗಾಗಿ ಉಳಿಸಿರಿ. ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದಾಗ ಅರಣ್ಯದಲ್ಲಿ ನಾನು ನಿಮಗೆ ಕೊಟ್ಟ ಈ ಆಹಾರವನ್ನು ನೋಡುವರು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಮೋಶೆಯು ಅವರಿಗೆ, “ಯೆಹೋವ ದೇವರು ಆಜ್ಞಾಪಿಸಿದ್ದು ಇದೇ: ‘ನಾನು ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಡಿಸಿದಾಗ, ಮರುಭೂಮಿಯಲ್ಲಿ ನಿಮಗೆ ತಿನ್ನಿಸಿದ ರೊಟ್ಟಿಯನ್ನು ನಿಮ್ಮ ಸಂತಾನಗಳು ನೋಡುವಂತೆ ಒಂದು ಓಮೆರ್ ಮನ್ನವನ್ನು ತುಂಬಿಸಿ ಇಟ್ಟಿರಬೇಕು,’ ಎಂಬುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:32
11 ತಿಳಿವುಗಳ ಹೋಲಿಕೆ  

ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು,


ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.


ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.


ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನೆಂದರೆ: ಪ್ರತಿಯೊಬ್ಬನು ತನ್ನ ಕುಟುಂಬದವರ ಸಂಖ್ಯಾನುಸಾರ ತಲೆಗೆ ಮೂರು ಸೇರಿನಂತೆ ತನ್ನ ಡೇರೆಯವರಿಗಾಗಿ ಕೂಡಿಸಿಕೊಳ್ಳಲಿ. ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಾಕಾರ ನೀವು ಕೂಡಿಸಿಕೊಳ್ಳಿರಿ” ಎಂದು ಹೇಳಿದನು.


ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.


ಆದಕಾರಣ ಮೋಶೆಯು ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು, ಅದರಲ್ಲಿ ಒಂದು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡಬೇಕು” ಎಂದು ಹೇಳಿದನು.


ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.


ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು. ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ, ಅವರಿಗೆ ಆಹಾರವನ್ನು ಉಣಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು