Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬೆಳಿಗ್ಗೆಯೂ ಸ್ವಾಮಿಯ ತೇಜಸ್ಸು ನಿಮಗೆ ಕಾಣಬರುವುದು. ನೀವು ಸರ್ವೇಶ್ವರನ ವಿರುದ್ಧ ಗೊಣಗುಟ್ಟಿದ ಮಾತುಗಳು ಅವರಿಗೆ ಕೇಳಿಸಿವೆ. ನಾವು ಎಷ್ಟು ಮಾತ್ರದವರು ನೀವು ನಮ್ಮ ವಿರುದ್ಧ ಗೊಣಗುಟ್ಟಲು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೊತ್ತಾರೆಯಲ್ಲಿಯೂ ಆತನ ಮಹಿಮೆಯು ನಿಮಗೆ ಕಾಣಬರುವದು. ನೀವು ಯೆಹೋವನ ಮೇಲೆ ಗುಣುಗುಟ್ಟುವ ಮಾತುಗಳು ಆತನಿಗೆ ಕೇಳಿಸಿದವು; ನಮ್ಮ ಮೇಲೆ ನೀವು ಗುಣುಗುಟ್ಟುವದೇನು? ನಾವು ಎಷ್ಟು ಮಾತ್ರದವರು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾಳೆ ಬೆಳಿಗ್ಗೆ ನೀವು ಯೆಹೋವನ ಮಹಿಮೆಯನ್ನು ನೋಡುವಿರಿ. ನೀವು ಯೆಹೋವನ ಮೇಲೆ ಗುಣುಗುಟ್ಟಿದ್ದೀರಿ. ಆತನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ; ಆತನೇ ನಿಮಗೆ ಸಹಾಯ ಮಾಡುವನು. ನಮ್ಮ ಮೇಲೆ ನೀವು ಗುಣುಗುಟ್ಟುತ್ತಾ ಬರಲು ನಾವೆಷ್ಟರವರು? ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ಯೆಹೋವನೇ. ಆತನೇ ನಿಮ್ಮ ಅಗತ್ಯತೆಗಳನ್ನು ಪೂರೈಸುವನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬೆಳಿಗ್ಗೆ ಯೆಹೋವ ದೇವರ ಮಹಿಮೆಯನ್ನು ನೋಡುವಿರಿ. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ನೀವು ಗೊಣಗುಟ್ಟಿದ್ದನ್ನು ಅವರು ಕೇಳಿದ್ದಾರೆ. ನಮಗೆ ವಿರೋಧವಾಗಿ ನೀವು ಗೊಣಗುಟ್ಟುವ ಹಾಗೆ ನಾವು ಯಾರು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:7
17 ತಿಳಿವುಗಳ ಹೋಲಿಕೆ  

ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.


ನೀನು ಮತ್ತು ನಿನ್ನ ಸಮೂಹದವರೆಲ್ಲರು ಯೆಹೋವನಿಗೆ ವಿರುದ್ಧವಾಗಿ ಕೂಡಿಕೊಂಡಿರಿ, ನನಗೆ ವಿಧೇಯನಾಗಿ ನಡೆಯುವ ಆರೋನನ ವಿರುದ್ಧವಾಗಿ ನೀವು ಗುಣಗುಟ್ಟುವುದೇಕೆ?” ಎಂದು ಕೇಳಿದನು.


ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು


ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.


ಅದು ಸಮೃದ್ಧಿಯಾಗಿ ಹೂಬಿಟ್ಟು, ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವುದು. ಲೆಬನೋನಿನ ಮಹಿಮೆಯೂ, ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ, ನಮ್ಮ ದೇವರ ವೈಭವವನ್ನೂ ಕಾಣುವವು.


ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.


ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.


ಸರ್ವಸಮೂಹದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಸೇರಿ ಬಂದಾಗ ದೇವದರ್ಶನದ ಗುಡಾರದ ಮೇಲೆ, ಮೇಘವು ಆವರಿಸಿಕೊಂಡಿತು ಮತ್ತು ಯೆಹೋವನ ತೇಜಸ್ಸು ಅಲ್ಲಿ ಕಾಣಿಸಿತು.


ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರೆಲ್ಲರಿಗೂ ಕಾಣಿಸಿಕೊಂಡಿತು.


“ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.


ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.


ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.


ಆಗ ಮೋಶೆ ಅವರಿಗೆ, “ನೀವು ಏನು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು.


“ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.


ಆಗ ಮೋಶೆ, “ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ” ಎಂದನು.


ನಾನು ಯಾರನ್ನು ಆಯ್ದುಕೊಳ್ಳುತ್ತೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲರು ನಿಮ್ಮಿಬ್ಬರ ವಿರುದ್ಧವಾಗಿ ಗುಣುಗುಟ್ಟುವುದನ್ನು ನಾನು ನಿಲ್ಲಿಸಿ ಬಿಡುವೆನು’” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು