Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಮೋಶೆ, “ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮೋಶೆ, “ಸಂಜೆ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನು ಕೊಡುವವರು ಸರ್ವೇಶ್ವರ. ನಾವು ಎಷ್ಟು ಮಾತ್ರದವರು? ಗೊಣಗುಟ್ಟುವ ನಿಮ್ಮ ಮಾತುಗಳು ಸರ್ವೇಶ್ವರನಿಗೆ ಕೇಳಿಸಿವೆ. ಆ ಗೊಣಗುಟ್ಟುವಿಕೆ ಸರ್ವೇಶ್ವರನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮೋಶೆ - ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಯೆಹೋವನಿಗೆ ಕೇಳಿಸಿದವು; ಆ ಗುಣುಗುಟ್ಟುವಿಕೆ ಯೆಹೋವನಿಗೇ ಹೊರತು ನಮಗಲ್ಲ; ನಾವು ಎಷ್ಟು ಮಾತ್ರದವರು ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಲ್ಲದೆ ಮೋಶೆಯು, “ನೀವು ಗೊಣಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗೊಣಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮೋಶೆ ಮುಂದುವರಿಸಿ, “ಸಂಜೆಯಲ್ಲಿ ಯೆಹೋವ ದೇವರು ನಿಮಗೆ ಮಾಂಸಾಹಾರವನ್ನೂ, ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ಕೊಡುವರು. ನಿಮ್ಮ ಗೊಣಗುಟ್ಟುವಿಕೆಯು ಯೆಹೋವ ದೇವರಿಗೆ ಹೊರತು ನಮಗಲ್ಲ. ನಾವು ಎಷ್ಟು ಮಾತ್ರದವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:8
17 ತಿಳಿವುಗಳ ಹೋಲಿಕೆ  

ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು.


ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.


ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.


ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.


“ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.


ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.


ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”


“ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ.


ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ಏಕೆ ನಿಮ್ಮ ಮನಸ್ಸಿನಲ್ಲಿ ದುರಾಲೋಚನೆಯನ್ನು ಮಾಡುತ್ತಿದ್ದೀರಿ?


ಏಕೆಂದರೆ ನೀನು ನನ್ನ ವಿರುದ್ಧ ಕೋಪಗೊಂಡಿರುವುದೂ, ಅಸಮಾಧಾನವಾಗಿರುವುದೂ ನನಗೆ ತಿಳಿದುಬಂತು. ಆದುದರಿಂದ ನಿನಗೆ ಮೂಗುದಾರವನ್ನೂ, ಕಡಿವಾಣವನ್ನೂ ಹಾಕಿ ಬಂದ ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು” ಎಂಬುದಾಗಿ ಹೇಳಿದ್ದಾನೆ.


ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು.


“ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.


ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು.


ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.


ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು