Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 18:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೋಶೆಯು ತನ್ನ ಮಾವನನ್ನು ಎದುರುಗೊಳ್ಳುವುದಕ್ಕೆ ಹೊರಟು ಆತನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮೋಶೆ ಹೊರಗೆ ಬಂದು ತನ್ನ ಮಾವನನ್ನು ಎದುರುಗೊಂಡು, ವಂದಿಸಿ, ಮುದ್ದಿಟ್ಟನು. ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಅವರು ಡೇರೆಯೊಳಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ತನ್ನ ಮಾವನನ್ನು ಎದುರುಗೊಳ್ಳುವದಕ್ಕೆ ಹೊರಟು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಮೋಶೆ ತನ್ನ ಮಾವನನ್ನು ಭೇಟಿಯಾಗಲು ಹೊರಗೆ ಹೋದನು. ಮೋಶೆ ಅವನ ಮುಂದೆ ತಲೆಬಾಗಿ ಅವನಿಗೆ ಮುದ್ದಿಟ್ಟನು. ಅವರಿಬ್ಬರು ಪರಸ್ಪರ ಕ್ಷೇಮ ಸಮಾಚಾರವನ್ನು ವಿಚಾರಿಸಿಕೊಂಡರು. ಬಳಿಕ ಅವರು ಹೆಚ್ಚು ಮಾತಾಡಲು ಮೋಶೆಯ ಡೇರೆಯೊಳಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮೋಶೆಗೆ ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ, ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 18:7
23 ತಿಳಿವುಗಳ ಹೋಲಿಕೆ  

ಲಾಬಾನನು ತನ್ನ ಸಹೋದರಿಯ ಮಗನಾದ ಯಾಕೋಬನು ಬಂದಿರುವ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರೆದುಕೊಂಡು ಬಂದನು.


ಆಕೆಯು ಅದೋನೀಯನಿಗಾಗಿ ಮಾತನಾಡುವುದಕ್ಕೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನು ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು, ರಾಜ ಮಾತೆಗೋಸ್ಕರ ಒಂದು ಆಸನವನ್ನು ತರಿಸಲು ಆಕೆಯು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.


ಊರೀಯನು ಬಂದಾಗ ದಾವೀದನು, “ಯೋವಾಬನೂ ಮತ್ತು ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆದಿದೆ?” ಎಂದು ವಿಚಾರಿಸಿದ, ನಂತರ


ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,


ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.


ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.


ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು.


ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.


ನೀನು ನನಗೆ ಮುದ್ದಿಡಲಿಲ್ಲ; ಇವಳಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಕಾಲಿಗೆ ಮುದ್ದಿಡುವುದನ್ನು ಬಿಟ್ಟಿಲ್ಲ.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


ಯೆಪ್ತಾಹನು ಮಿಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ, ನೃತ್ಯಮಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆಯು ಅವನಿಗೆ ಒಬ್ಬಳೇ ಮಗಳಾಗಿದ್ದಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.


ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಗಡಿಯಾದ ಅರ್ನೋನ್ ನದಿಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೋದನು.


ಯೋಸೇಫನು ತನ್ನ ರಥವನ್ನು ಸಿದ್ಧಪಡಿಸಿಕೊಂಡು ತನ್ನ ತಂದೆಯಾದ ಇಸ್ರಾಯೇಲನನ್ನು ಎದುರುಗೊಳ್ಳುವುದಕ್ಕೋಸ್ಕರ ಗೋಷೆನಿಗೆ ಹೋಗಿ ಅವನನ್ನು ಸಂಧಿಸಿ, ತಂದೆಯನ್ನು ಬಹಳ ಹೊತ್ತಿನ ವರೆಗೆ ಅಪ್ಪಿಕೊಂಡು ಅತ್ತನು.


ಇದಲ್ಲದೆ ಅವನು ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವರು ಅವನ ಸಂಗಡ ಮಾತನಾಡಿದರು.


ಆದರೆ ನೀನು ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ, ಮುದ್ದಿಡುವುದಕ್ಕಾದರೂ ಆಗದಂತೆ ಮಾಡಿದಿ. ನೀನು ಮಾಡಿದ್ದು ಹುಚ್ಚು ಕೆಲಸ.


ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು.


ಇದಲ್ಲದೆ ಯೆಹೋವನು ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳುವುದಕ್ಕೆ ಮರುಭೂಮಿಗೆ ಹೊರಟುಹೋಗು” ಎಂದನು. ಅವನು ಹೋಗಿ ದೇವರ ಬೆಟ್ಟದಲ್ಲೇ ಅವನನ್ನು ಎದುರುಗೊಂಡು ಮುದ್ದಿಟ್ಟನು.


ಅವನು ಮೋಶೆಗೆ, “ನಿನ್ನ ಮಾವನಾದ ಇತ್ರೋವನಾದ ನಾನು ನಿನ್ನ ಹೆಂಡತಿಯನ್ನು, ನಿನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆ” ಎಂದು ಹೇಳಿ ಕಳುಹಿಸಿದನು.


ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿದ್ದನು. ಅದಕ್ಕೆ ದೇವದರ್ಶನದ ಗುಡಾರ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರೂ ಪಾಳೆಯದ ಹೊರಗಿದ್ದ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.


ಇದಲ್ಲದೆ ಇಲ್ಲಿ ಹತ್ತು ಗಿಣ್ಣದ ಉಂಡೆಗಳಿವೆ, ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.


ದಾವೀದನು ತಾನು ತಂದವುಗಳನ್ನು ಸಾಮಾನು ಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿಹೋಗಿ ತನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸುತ್ತಾ ಅವರೊಡನೆ ಮಾತನಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು