Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 19:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತಾಡುವುದನ್ನು ಜನರು ಕೇಳುವಂತೆಯೂ ಎಂದಿಗೂ ನಿನ್ನನ್ನು ನಂಬುವಂತೆಯೂ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಮೋಶೆಗೆ - ಇಗೋ ನಾನು ನಿನ್ನ ಸಂಗಡ ಮಾತಾಡುವಾಗ ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಮೋಶೆಗೆ, “ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬಂದು ಜನರೆಲ್ಲರಿಗೂ ಕೇಳುವಂತೆ ನಿನ್ನೊಡನೆ ಮಾತಾಡುವೆನು. ನೀನು ಹೇಳುವುದನ್ನು ಜನರು ಯಾವಾಗಲೂ ನಂಬಲು ಇದು ಸಹಾಯಕವಾಗುವುದು” ಎಂದು ಹೇಳಿದನು. ಆಗ ಮೋಶೆಯು ಜನರು ಹೇಳಿದ್ದನ್ನೆಲ್ಲಾ ದೇವರಿಗೆ ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೆಹೋವ ದೇವರು ಮೋಶೆಗೆ, “ನಾನು ನಿನ್ನ ಸಂಗಡ ಮಾತನಾಡುವುದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ದಟ್ಟವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ,” ಎಂದರು. ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 19:9
25 ತಿಳಿವುಗಳ ಹೋಲಿಕೆ  

ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.


ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ಮೋಡಗಳೂ, ಕಾರ್ಗತ್ತಲೆಯೂ ಆತನ ಸುತ್ತಲೂ ಇರುತ್ತವೆ; ಯೆಹೋವನು ನೀತಿ ಮತ್ತು ನ್ಯಾಯಗಳಿಂದ ಆಳುತ್ತಾನೆ.


ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಹೋದನು.


ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು.


ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.


ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.


ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗವಾದ ಮೇಘವಾಹನವಾಗಿ ಐಗುಪ್ತಕ್ಕೆ ಬರುವನು. ಆತನು ಅವರಿಗೆ ಎದುರಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತರ ಹೃದಯವು ತಮ್ಮೊಳಗೆ ಕರಗಿ ನೀರಾಗುವುದು.


ಎಫ್ರಾಯೀಮಿಗೆ ಶಿರಸ್ಸು ಸಮಾರ್ಯ, ಸಮಾರ್ಯಕ್ಕೆ ಶಿರಸ್ಸು ರೆಮಲ್ಯನ ಮಗನು ತಾನೇ. ನೀವು ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ” ಎಂಬುದೇ.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.


ತರುವಾಯ ಸೊಲೊಮೋನನು, ಯೆಹೋವನೇ “ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ;


ತರುವಾಯ ಸೊಲೊಮೋನನು, “ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ.


ಆಗ ಯೆಹೋವನು ಅವನಿಗೆ, “ಇದರಿಂದ ಅವರು ತಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು, ನಿನಗೆ ಕಾಣಿಸಿಕೊಂಡಿರುವುದು ನಿಜ ಎಂದು ನಂಬುವರು” ಎಂದು ಹೇಳಿದನು.


ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.


ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.


ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ನಿಂತು ಆರೋನನ್ನು ಮತ್ತು ಮಿರ್ಯಾಮಳನ್ನು ಹತ್ತಿರಕ್ಕೆ ಕರೆದನು. ಅವರು ಮುಂದೆ ಬಂದರು.


ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.


ಆ ಸಂಗತಿಗಳು ಯಾವುವೆಂದರೆ, ನೀವು ಹೋರೇಬಿನಲ್ಲಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದಾಗ ಆತನು ನನಗೆ, “ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕೂಡಿಸು; ಅವರು ತಾವು ಭೂಮಿಯ ಮೇಲಿರುವ ದಿನಗಳಲ್ಲೆಲ್ಲಾ ನನಗೆ ಭಯಭಕ್ತಿಯಿಂದಿರುವುದಕ್ಕೆ ಕಲಿತುಕೊಂಡು ತಮ್ಮ ಮಕ್ಕಳಿಗೂ ಕಲಿಸಿಕೊಡುವಂತೆ ಅವರಿಗೆ ಆಜ್ಞೆಗಳನ್ನು ತಿಳಿಸುತ್ತೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು