Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ವ್ಯಭಿಚಾರಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ವ್ಯಭಿಚಾರಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ವ್ಯಭಿಚಾರ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನೀವು ವ್ಯಭಿಚಾರ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ವ್ಯಭಿಚಾರ ಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:14
24 ತಿಳಿವುಗಳ ಹೋಲಿಕೆ  

ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.


ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.


“‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು.


ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ದುಃಖಕಾಲವು ತೀರಿದ ನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ, ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕೃತ್ಯಗಳು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದೂ, ಅನೀತಿಯೂ ಆಗಿತ್ತು.


ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, “ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು.


“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಏಕೆಂದರೆ ವ್ಯಭಿಚಾರ ಮಾಡಬಾರದೆಂದು ಹೇಳಿದವನೇ ನರಹತ್ಯ ಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಶಾಸ್ತ್ರವನ್ನು ಮೀರಿದವನಾಗಿರುತ್ತಿ.


ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.”


ಈ ಮನೆಯಲ್ಲಿ ನನಗಿಂತ ಯಾರೂ ದೊಡ್ಡವರಲ್ಲ. ನೀನು ಅವನ ಧರ್ಮಪತ್ನಿಯಾದುದರಿಂದ ನಿನ್ನನ್ನು ಮಾತ್ರ ನನಗೆ ಅಧೀನ ಮಾಡಲಿಲ್ಲ. ಹೀಗಿರುವಲ್ಲಿ ನಾನು ಇಂಥಾ ಮಹಾ ದುಷ್ಟ ಕಾರ್ಯವನ್ನು ಮಾಡಿ ದೇವರಿಗೆ ವಿರೋಧವಾಗಿ ಹೇಗೆ ಪಾಪ ಮಾಡಲಿ?” ಎಂದು ತನ್ನ ದಣಿಯ ಹೆಂಡತಿಗೆ ಉತ್ತರ ಹೇಳಿದನು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ‘ಯಾರ ಹೆಂಡತಿ ತಪ್ಪು ದಾರಿ ಹಿಡಿದು ಗಂಡನಿಗೆ ಅಪನಂಬಿಗಸ್ತಳಾಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು