Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 20:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನಲ್ಲದೆ ನಿಮಗೆ ಬೇರೆ ದೇವರುಗಳು ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನನ್ನನ್ನಲ್ಲದೆ ಬೇರೆ ಯಾವ ದೇವರುಗಳನ್ನೂ ನೀವು ಆರಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 20:3
37 ತಿಳಿವುಗಳ ಹೋಲಿಕೆ  

ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.


ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.


ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;


ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ.


ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸಬೇಡಿರಿ; ನಿಮ್ಮ ಕೈಕೆಲಸದ ಬೊಂಬೆಗಳಿಂದ ನನ್ನನ್ನು ರೇಗಿಸಬೇಡಿರಿ; ಹೀಗಾದರೆ ನಾನು ನಿಮಗೆ ಯಾವ ಕೇಡನ್ನೂ ಮಾಡುವುದಿಲ್ಲ’ ಎಂಬುದೇ.


ಸುತ್ತಮುತ್ತಲಿರುವ ಜನಾಂಗಗಳು ಸೇವಿಸುವ ದೇವರುಗಳನ್ನು ನೀವು ಆರಾಧಿಸಬಾರದು.


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”


ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.


ಮಿಥ್ಯಾ ದೀನತೆಯನ್ನು ಅಪೇಕ್ಷಿಸಿ ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದು, ದರ್ಶನಗಳಾದವೆಂದು ಕೊಚ್ಚಿಕೊಂಡು, ಪ್ರಾಪಂಚಿಕ ಬುದ್ಧಿಯಿಂದಾಗಿ, ಕಾರಣವಿಲ್ಲದೆ ಉಬ್ಬಿಕೊಂಡು ಇರುವಂಥವರಿಗೆ ನಿಮಗೆ ದೊರಕಿರುವ ಬಿರುದನ್ನು ಅಪಹರಿಸುವುದಕ್ಕೆ ಅವಕಾಶಕೊಡಬೇಡಿರಿ.


ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.


ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.


ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.


ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? ನಿನ್ನ ಹಾಗೆ ಪರಿಶುದ್ಧತ್ವದಲ್ಲಿ ಸರ್ವೋತ್ತಮನು ಮಹಿಮೆ ಹೊಂದಿದವನು, ಭಯಂಕರನೂ, ಅದ್ಭುತ ಕೃತ್ಯಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನರು ಯಾರಿದ್ದಾರೆ?


ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.


ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”


ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು. ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ.


ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.


ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.


ಆದರೆ ಅವನು ನನಗೆ, “ನೀನು ಹಾಗೆ ಮಾಡಬೇಡ! ನೋಡು. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ, ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಕೊಂಡು ನಡೆಯುವವರಿಗೂ ಸೇವೆಯನ್ನು ಮಾಡುವ ಸೇವಕನಾಗಿದ್ದೇನೆ. ದೇವರನ್ನೇ ಆರಾಧಿಸು” ಎಂದು ಹೇಳಿದನು.


ಆದ್ದರಿಂದ ವಿಗ್ರಹಗಳಿಗೆ ಅರ್ಪಿಸಿದ ಆಹಾರಪದಾರ್ಥಗಳನ್ನು ತಿನ್ನುವುದರ ವಿಷಯದಲ್ಲಿ, “ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದು” ನಮಗೆ ತಿಳಿದಿದೆ ಮತ್ತು “ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ” ಬಲ್ಲೆವು.


ನಾನು ಅವರಿಗೆ ಅಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೇ ಬಿಟ್ಟು ಹೋಗಿ ತಮಗೆ ಎರಕ ಹೊಯ್ದ ಹೋರಿಕರುವನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ, ‘ಇಸ್ರಾಯೇಲ್ಯರೇ ನೋಡಿರಿ ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ’” ಎಂದು ಹೇಳಿದನು.


ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.


ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.


ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,


ನಾನಾದರೋ ನೀನು ಐಗುಪ್ತ ದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.


ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.


ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.


ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ, ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುತ್ತಿದ್ದಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಆಜ್ಞಾಪಿಸಿದ್ದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’” ಅಂದನು.


ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಪ್ರಾಮಾಣಿಕವಾದ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.


ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.


ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಆರಾಧಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ’” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು