Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “‘ನಿಮ್ಮಲ್ಲಿ ಯಾರಾದರೂ ಇಬ್ರಿಯನೊಬ್ಬನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ, ಆ ಇಬ್ರಿಯನು ಆರು ವರ್ಷ ದಾಸನಾಗಿದ್ದು ಏಳನೆಯ ವರ್ಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಿಮ್ಮಲ್ಲಿ ಯಾವನಾದರು ಒಬ್ಬ ಇಬ್ರಿಯನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರ್ಷ ಗುಲಾಮನಾಗಿ ದುಡಿದು ಏಳನೆಯ ವರ್ಷ ‘ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಿಮ್ಮಲ್ಲಿ ಯಾವನಾದರೂ ಇಬ್ರಿಯನನ್ನು ದಾಸತ್ವಕ್ಕಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರುಷ ದಾಸನಾಗಿದ್ದು ಏಳನೆಯ ವರುಷದಲ್ಲಿ ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನೀವು ಇಬ್ರಿಯ ಗುಲಾಮನನ್ನು ಕೊಂಡುಕೊಂಡರೆ, ಆ ಗುಲಾಮನು ಆರು ವರ್ಷಗಳವರೆಗೆ ಮಾತ್ರ ನಿಮ್ಮ ಸೇವೆಮಾಡುವನು. ಆರು ವರ್ಷಗಳ ನಂತರ, ಅವನು ಬಿಡುಗಡೆಯಾಗುವನು, ಅವನು ಏನೂ ಕೊಡಬೇಕಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ಹಿಬ್ರಿಯ ದಾಸನನ್ನು ಕೊಂಡುಕೊಂಡರೆ, ಅವನು ಆರು ವರ್ಷ ನಿನಗೆ ಸೇವೆಮಾಡಬೇಕು. ಏಳನೆಯ ವರ್ಷದಲ್ಲಿ ಅವನು ಏನೂ ಕೊಡದೆ ಬಿಡುಗಡೆಯಾಗಿ ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:2
18 ತಿಳಿವುಗಳ ಹೋಲಿಕೆ  

ದಾಸನನ್ನು ಬಿಡುಗಡೆಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ದಾಸನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲಾ. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಗೊಳಿಸುವನು.


ಆದರೆ ನೀವು ಕ್ರಯಕ್ಕೆ ತೆಗೆದುಕೊಂಡ ಪ್ರತಿಯೊಬ್ಬ ಗುಲಾಮನು ಸುನ್ನತಿ ಮಾಡಿಸಿಕೊಂಡ ನಂತರ ಅದನ್ನು ತಿನ್ನಬಹುದು.


ಅವರಿಗೆ, “ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತಿದ್ದೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು” ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.


ಆತನು ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ ಪರ್ಣಶಾಲೆಗಳ ಜಾತ್ರೆಯಲ್ಲಿ


ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಸಾಲವನ್ನು ಬಿಟ್ಟುಬಿಡಬೇಕು.


ಸೂರ್ಯೋದಯವಾದ ನಂತರ ಒಬ್ಬನು ಕಳ್ಳತನಮಾಡಿ ಸಿಕ್ಕಿಬಿದ್ದಾಗ, ಅವನನ್ನು ಹೊಡೆದು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಬೇಕು. ಅವನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂತಿರುಗಿಸಬೇಕು. ಅವನಲ್ಲಿ ಕೊಡಲು ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ಗುಲಾಮನಾಗಿ ಮಾರಲ್ಪಡಬೇಕು.


ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.


ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.


ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, “ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ” ಎಂದು ಮೊರೆಯಿಟ್ಟಳು.


ಅದಕ್ಕೆ ಏಸಾವನು, “ಯಾಕೋಬನೆಂಬ ಹೆಸರು ಅವನಿಗೆ ಉಂಟಾದದ್ದು ನ್ಯಾಯವಲ್ಲವೋ? ಎರಡು ಸಾರಿ ನನ್ನನ್ನು ವಂಚಿಸಿದ್ದಾನೆ, ಹಿಂದೆ ನನ್ನ ಚೊಚ್ಚಲತನದ ಹಕ್ಕನ್ನು ಅಪಹರಿಸಿದನು; ಈಗ ಬಂದು ನನಗಾಗ ಬೇಕಾಗಿದ್ದ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ” ಎಂದು ಹೇಳಿ ತನ್ನ ತಂದೆಯನ್ನು, “ನನಗೋಸ್ಕರವೂ ನಿನ್ನ ಬಳಿ ಆಶೀರ್ವಾದವಿಲ್ಲವೋ” ಎಂದು ಕೇಳಲು,


ದೇವರು ನಿನಗೆ ಆಕಾಶದ ಮಂಜನ್ನೂ, ಸಾರವುಳ್ಳ ಭೂಮಿಯನ್ನೂ ಕೊಟ್ಟು ದವಸಧಾನ್ಯಗಳನ್ನೂ, ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ.


ಪುರುಷನು ಒಂಟಿಯಾಗಿ ಬಂದಿದ್ದರೆ ಒಂಟಿಯಾಗಿಯೇ ಹೊರಟುಹೋಗಬೇಕು. ಮದುವೆಯಾಗಿ ಬಂದಿದ್ದರೆ ಅವನ ಹೆಂಡತಿಯೂ ಅವನ ಜೊತೆ ಹೋಗಬೇಕು.


ಯಾರಾದರೂ ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಬಿಡುಗಡೆಯಾಗಿ ಹೋಗುವ ಪ್ರಕಾರ ಅವಳು ಬಿಡುಗಡೆಯಾಗಿ ಹೋಗಬಾರದು.


ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು