ವಿಮೋಚನಕಾಂಡ 21:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೇ ಹೋದದ್ದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದು ಹಾಕಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಅಲ್ಲದೆ ಅದರ ಯಜಮಾನನೂ ಮರಣದಂಡನೆಗೆ ಗುರಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆದರೆ ಆ ಎತ್ತು ಹಿಂದಿನಿಂದಲೂ ತಿವಿಯುವ ಸ್ವಭಾವದ್ದೆಂದು ಒಡೆಯನಿಗೆ ಎಚ್ಚರಿಕೆ ನೀಡಿದ್ದರೂ ಅವನು ಅದನ್ನು ಕಟ್ಟಿಹಾಕದೆ ಹೋದ ಕಾರಣ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಸಾಯಿಸಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು, ಮಾತ್ರವಲ್ಲ ಆ ಒಡೆಯನು ಕೂಡ ಮರಣದಂಡನೆಗೆ ಗುರಿ ಆಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಆದರೆ ಆ ಎತ್ತು ತತ್ಪೂರ್ವದಲ್ಲಿ ಹಾಯುವ ಸ್ವಭಾವದ್ದೆಂದು ಒಡೆಯನು ಎಚ್ಚರಿಕೆಯನ್ನು ಹೊಂದಿದಾಗ್ಯೂ ಅದನ್ನು ಕಟ್ಟಿಹಾಕದೆ ಹೋದದರಿಂದ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಸಾಯಿಸಿದ್ದಾದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕಲ್ಲದೆ ಒಡೆಯನೂ ಮರಣಶಿಕ್ಷೆಗೆ ಗುರಿಯಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆದರೆ ಹಿಂದೊಮ್ಮೆ ಆ ಎತ್ತು ಜನರಿಗೆ ತಿವಿದಿದ್ದು, ಅದರ ಮಾಲೀಕನಿಗೆ ಇದರ ವಿಷಯದಲ್ಲಿ ಎಚ್ಚರಿಕೆ ನೀಡಿದ್ದರೆ ಆಗ ಆ ಮಾಲೀಕನು ತಪ್ಪಿತಸ್ಥನಾಗಿದ್ದಾನೆ. ಯಾಕೆಂದರೆ ಅವನು ಆ ಎತ್ತನ್ನು ಕಟ್ಟಿಹಾಕಲಿಲ್ಲ ಅಥವಾ ಅದರ ಸ್ಥಳದಲ್ಲಿ ಬಂಧಿಸಿರಲಿಲ್ಲ. ಆದ್ದರಿಂದ ಎತ್ತನ್ನು ಕಟ್ಟಿಹಾಕದೆ ಇದ್ದುದರಿಂದ, ಅದು ಯಾರನ್ನಾದರೂ ಕೊಂದರೆ, ಆಗ ಆ ಮಾಲೀಕನು ತಪ್ಪಿತಸ್ಥನಾಗಿದ್ದಾನೆ. ನೀವು ಎತ್ತನ್ನು ಕಲ್ಲೆಸೆದು ಕೊಲ್ಲಬೇಕಲ್ಲದೆ ಅದರ ಮಾಲೀಕನನ್ನೂ ಕೊಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೆ ಇದ್ದುದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದುಹಾಕಿದರೆ, ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಆದರೆ ಯಜಮಾನನೂ ಮರಣದಂಡನೆಗೆ ಗುರಿಯಾಗುವನು. ಅಧ್ಯಾಯವನ್ನು ನೋಡಿ |