Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 21:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ತಿವಿಸಿಕೊಂಡು ಸತ್ತವರು ದಾಸದಾಸಿಯರಾಗಿದ್ದರೆ ಅವರ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಈಡುಕೊಡಿಸಬೇಕು ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ತಿವಿಸಿಕೊಂಡು ಸತ್ತವನು ದಾಸನು ಅಥವಾ ದಾಸಿಯು ಆಗಿದ್ದ ಪಕ್ಷಕ್ಕೆ ಅವರ ಯಜಮಾನನಿಗೆ ಮೂವತ್ತು ರೂಪಾಯಿ ಈಡುಕೊಡಿಸಬೇಕು, ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ಎತ್ತು ಗುಲಾಮನನ್ನು ಕೊಂದರೆ, ಆಗ ಆ ಪಶುವಿನ ಮಾಲೀಕನು ಗುಲಾಮನ ಯಜಮಾನನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವನ್ನು ಪಾಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದಾಸನನ್ನಾದರೂ, ದಾಸಿಯನ್ನಾದರೂ ಎತ್ತು ಹಾಯ್ದರೆ, ದಾಸನ, ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 21:32
9 ತಿಳಿವುಗಳ ಹೋಲಿಕೆ  

“ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.


ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.


ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.


ಆ ಎತ್ತು ಮಗನನ್ನಾಗಲಿ ಅಥವಾ ಮಗಳನ್ನಾಗಲಿ ತಿವಿದರೆ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.


ಒಬ್ಬನು ಗುಂಡಿಯನ್ನು ಅಗೆದರೆ ಇಲ್ಲವೆ ಅಗೆದು ಅದನ್ನು ಮುಚ್ಚದೇ ಇದ್ದು ಅದರಲ್ಲಿ ಎತ್ತಾಗಲಿ, ಕತ್ತೆಯಾಗಲಿ ಆ ಗುಂಡಿಯಲ್ಲಿ ಬಿದ್ದು ಸತ್ತರೆ,


ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲಾ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು