Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಒಬ್ಬನು ಮತ್ತೊಬ್ಬನಿಂದ ಪಶುವನ್ನು ಸ್ವಲ್ಪ ಕಾಲಕ್ಕೆ ಬಾಡಿಗೆಗೆ ತೆಗೆದುಕೊಂಡಿರಲಾಗಿ ಆ ಪಶುವಿನ ಒಡೆಯನು ಅದರ ಹತ್ತಿರವಿಲ್ಲದ ಸಮಯದಲ್ಲಿ ಅದು ಗಾಯಗೊಂಡರೆ ಇಲ್ಲವೆ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಒಬ್ಬನು ಮತ್ತೊಬ್ಬನಿಂದ ಪಶುಪ್ರಾಣಿಯನ್ನು ಕೊಂಚಕಾಲಕ್ಕೆ ಎರವಲಾಗಿ ತೆಗೆದುಕೊಂಡಿರುವಾಗ ಆ ಪ್ರಾಣಿಯ, ಒಡೆಯನು ಹತ್ತಿರವಿಲ್ಲದ ಸಮಯದಲ್ಲಿ ಗಾಯಗೊಂಡರೆ ಅಥವಾ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಒಬ್ಬನು ಮತ್ತೊಬ್ಬನಿಂದ ಪಶುವನ್ನು ಸ್ವಲ್ಪಕಾಲಕ್ಕೆ ತೆಗೆದುಕೊಂಡಿರಲಾಗಿ ಆ ಪಶುವಿನ ಒಡೆಯನು ಅದರ ಹತ್ತಿರವಿಲ್ಲದ ಸಮಯದಲ್ಲಿ ಅದು ಊನವಾದರೆ ಇಲ್ಲವೆ ಸತ್ತರೆ ಕೇಳಿಕೊಂಡವನು ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಸ್ವಲ್ಪಕಾಲಕ್ಕೆ ಸಾಲವಾಗಿ ತೆಗೆದುಕೊಂಡಿರುವಾಗ ಅದರ ಮಾಲೀಕನು ಅದರ ಸಮೀಪದಲ್ಲಿ ಇಲ್ಲದಿರುವ ಸಮಯದಲ್ಲಿ ಆ ಪಶುವಿಗೆ ಗಾಯವಾದರೆ ಅಥವಾ ಅದು ಸತ್ತುಹೋದರೆ, ಸಾಲ ತೆಗೆದುಕೊಂಡವನು ಆ ಪಶುವಿಗೆ ಈಡುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಲಾಗಿ ತೆಗೆದುಕೊಂಡಿರಲಾಗಿ ಅದರ ಒಡೆಯನು ಅದರ ಹತ್ತಿರ ಇಲ್ಲದಿರುವಾಗ, ಆ ಪಶುವಿಗೆ ಊನವಾದರೆ, ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಈಡು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:14
11 ತಿಳಿವುಗಳ ಹೋಲಿಕೆ  

ಹೇಗೆಂದರೆ ಯೆಹೋವನು ನೇಮಿಸಿದ ಬಿಡುಗಡೆಯ ವರ್ಷವು ಬಂತೆಂದು ಪ್ರಕಟವಾದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು. ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.


ಪಶುವನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು, ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.


ಆ ಗುಂಡಿಯನ್ನು ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡು ಕೊಡಬೇಕು. ಎತ್ತಿನ ಯಜಮಾನನಿಗೆ ತೃಪ್ತಿಯಾಗುವಷ್ಟು ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ಆ ಮನುಷ್ಯನು ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲ ಎಂಬುದನ್ನು ದೃಢಪಡಿಸುವುದಕ್ಕಾಗಿ ಯೆಹೋವನ ಮೇಲೆ ಪ್ರಮಾಣಮಾಡಬೇಕು. ಆಗ ಪಶುವಿನ ಒಡೆಯನು ಆ ಪ್ರಮಾಣವಾಕ್ಯವನ್ನು ನಂಬಬೇಕು. ಪ್ರಮಾಣಮಾಡಿದವನು ಅದಕ್ಕೆ ಈಡುಕೊಡಬೇಕಾದ ಅಗತ್ಯವಿರುವುದಿಲ್ಲ.


ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.


ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.


ಮತ್ತು ಕೆಲವರು, “ಅರಸನ ಸರ್ಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಾವು ನಮ್ಮ ಹೊಲ ದ್ರಾಕ್ಷಿತೋಟಗಳ ಮೇಲೆ ಹಣವನ್ನು ಸಾಲವಾಗಿ ತೆಗೆದುಕೊಳ್ಳಬೇಕಾಯಿತು” ಎಂದು ಹೇಳಿದರು.


ಕಾಡುಮೃಗವು ಆ ಪಶುವನ್ನು ಕೊಂದಿದ್ದರೆ, ಅದರ ಹೆಣವನ್ನು ಗುರುತಿಗಾಗಿ ತೋರಿಸಲಿ. ಕಾಡುಮೃಗ ಕೊಂದಿದ್ದಕ್ಕೆ ಈಡು ಕೊಡಬೇಕಾದ ಅಗತ್ಯವಿಲ್ಲ.


ಯಜಮಾನನು ಅದರ ಹತ್ತಿರದಲ್ಲೇ ಇದಿದ್ದರೆ, ಅವನಿಗೆ ಈಡುಕೊಡಬೇಕಾದ ಅಗತ್ಯವಿಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡಿದ್ದರೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣಿಕೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು