Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 “ದೇವರನ್ನು ದೂಷಿಸಬಾರದು; ನಿಮ್ಮ ಜನನಾಯಕನನ್ನು ಶಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ದೇವರನ್ನು ದೂಷಿಸಬಾರದು; ನಿಮ್ಮ ಜನರಲ್ಲಿ ಅಧಿಪತಿಯಾಗಿರುವವನನ್ನು ಶಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ನೀವು ದೇವರನ್ನಾಗಲಿ ಅಥವಾ ನಿಮ್ಮ ನಾಯಕರುಗಳನ್ನಾಗಲಿ ಶಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ದೇವರನ್ನು ದೂಷಿಸಬೇಡ, ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:28
28 ತಿಳಿವುಗಳ ಹೋಲಿಕೆ  

ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು.


ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು. ಮಲಗುವ ಕೋಣೆಯಲ್ಲಿಯೂ ಧನಿಕನನ್ನು ಬಯ್ಯದಿರು. ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸುವವು; ಪಕ್ಷಿಯು ಆ ವಿಷಯವನ್ನು ತಿಳಿಸುವುದು.


ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ.


ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.


ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನಿಗೆ ಮರಣಶಿಕ್ಷೆಯಾಗಬೇಕು.


ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.


“ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರನುಸಾರವಾಗಿ, ನನ್ನನ್ನು ವಿಚಾರಣೆಮಾಡುವುದಕ್ಕೆ ಕುಳಿತುಕೊಂಡು ಧರ್ಮಶಾಸ್ತ್ರದ ವಿರುದ್ಧವಾಗಿ ನನ್ನನ್ನು ಹೊಡೆಯುವುದಕ್ಕೆ ಅಪ್ಪಣೆಕೊಡುತ್ತೀಯೋ?” ಅಂದನು.


ಯೆಹೋವನೇ, ಪೂರ್ಣಮನಸ್ಸಿನಿಂದ ನಿನ್ನನ್ನು ಕೊಂಡಾಡುವೆನು; ದೇವರುಗಳ ಎದುರಿನಲ್ಲಿ ನಿನ್ನನ್ನು ಕೀರ್ತಿಸುವೆನು.


ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.


ಆದರೆ ದಾವೀದನು, “ಅವನನ್ನು ಕೊಲ್ಲಬೇಡ, ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಪರಿಗಣಿಸಲ್ಪಡುವುದಿಲ್ಲ?” ಅಂದನು.


ಈ ಹೊತ್ತು ಯೆಹೋವನು ಗವಿಯಲ್ಲಿ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆಂಬುದು ಈಗ ನಿನಗೆ ಗೊತ್ತಾಯಿತಲ್ಲವೋ? ನಿನ್ನನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಯೆಹೋವನ ಅಭಿಷಿಕ್ತನಾದ ನನ್ನ ಒಡೆಯನ ಮೇಲೆ ಕೈಹಾಕುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆನು.


ಅವನು ತನ್ನ ಜನರಿಗೆ, “ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ, ನನ್ನ ಒಡೆಯನೂ ಆಗಿದ್ದಾನೆ. ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿ ಮಾಡಲಿ” ಎಂದು ಹೇಳಿದನು


ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.


ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.


ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ, ಗೇರನ ಮಗನೂ ಆದ ಶಿಮ್ಮೀಯು ದಾವೀದನನ್ನು ಶಪಿಸುತ್ತಾ, ಆ ಊರಿನಿಂದ ಹೊರಗೆ ಬಂದನು.


ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ, “ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ಶಪಿಸುವುದೇನು? ಅಪ್ಪಣೆಯಾಗಲಿ. ನಾನು ಅವನಿರುವಲ್ಲಿಗೆ ಹೋಗಿ, ಅವನ ತಲೆಯನ್ನು ಹಾರಿಸಿಕೊಂಡು ಬರುವೆನು” ಎಂದನು.


ಚೆರೂಯಳ ಮಗನಾದ ಅಬೀಷೈಯು, “ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ” ಎಂದನು.


ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.


“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.


ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು.


ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.


ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು