Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 22:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕಳ್ಳನು ಸಿಕ್ಕದೆ ಹೋದರೆ ಆ ಮನೆಯ ಯಜಮಾನ ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ನಿಶ್ಚಯಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕಳ್ಳನು ಸಿಕ್ಕದೆಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಏನೋ ಎಂಬದನ್ನು ನಿಶ್ಚಯಿಸುವದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ನೀವು ಕಳ್ಳನನ್ನು ಕಂಡುಹಿಡಿಯಲಾಗದಿದ್ದರೆ, ಆ ಮನೆಯ ಮಾಲೀಕನು ತಪ್ಪಿತಸ್ಧನಾಗಿದ್ದಾನೋ ಇಲ್ಲವೋ ಎಂದು ದೇವರು ನಿರ್ಣಯಿಸುವನು. ಮನೆಯ ಮಾಲೀಕನು ದೇವರ ಸನ್ನಿಧಿಗೆ ಹೋಗಬೇಕು. ಅವನು ಕದ್ದಿದ್ದಾನೋ ಇಲ್ಲವೋ ಎಂದು ದೇವರು ತೀರ್ಮಾನಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ವಸ್ತುಗಳನ್ನು ಅವನು ಮುಟ್ಟಲಿಲ್ಲವೆಂದು ವಿಚಾರಿಸುವುದಕ್ಕೆ ದೇವರ ಸನ್ನಿಧಿಯಲ್ಲಿ ಅವನನ್ನು ಹಾಜರುಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 22:8
9 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.


ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.


ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು.


ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.


ದಾವೀದನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತ ನಾಲ್ಕು ಸಾವಿರ ಜನರನ್ನು ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ ಜನರನ್ನು,


ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದರ ವಿಷಯದಲ್ಲಿಯೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆಗಳ ವಿಷಯವಾದರೂ, ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ, ಇಬ್ಬರು ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾನೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.


“ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ಈ ಯಜ್ಞವೇದಿಯ ಮುಂದೆ ನಿಂತು ಪ್ರಮಾಣಮಾಡುವುದಾದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು