Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಕರ್ತನಾದ ಯೆಹೋವನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ವರ್ಷಕ್ಕೆ ಮೂರು ಸಾರಿ ನಿಮ್ಮ ಗಂಡಸರೆಲ್ಲರು ಸರ್ವೇಶ್ವರನೂ ದೇವರೂ ಆದ ನನ್ನ ಸನ್ನಿಧಿಗೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ವರುಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರು ಕರ್ತನಾದ ಯೆಹೋವನ ಸನ್ನಿಧಿಗೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಹೀಗೆ ಪ್ರತಿವರ್ಷ ಮೂರು ಸಲ ಗಂಡಸರೆಲ್ಲರೂ ಒಂದು ವಿಶೇಷ ಸ್ಥಳಕ್ಕೆ ದೇವರಾದ ಯೆಹೋವನ ಸನ್ನಿಧಿಗೆ ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಪುರುಷರೆಲ್ಲಾ ಸಾರ್ವಭೌಮ ಯೆಹೋವ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:17
11 ತಿಳಿವುಗಳ ಹೋಲಿಕೆ  

ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.


ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ಇಸ್ರಾಯೇಲರ ದೇವರಾಗಿರುವ ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಬರಬೇಕು.


ಆತನು ಹನ್ನೆರಡು ವರ್ಷದವನಾದಾಗ ಅವರು ಪದ್ಧತಿಯ ಪ್ರಕಾರ ಅಲ್ಲಿಗೆ ಹೋದರು.


ಅವರು ಹೆಚ್ಚು ಹೆಚ್ಚಾಗಿ ಬಲಹೊಂದಿ, ಚೀಯೋನ್ ಗಿರಿಯಲ್ಲಿ ದೇವರ ಸನ್ನಿಧಿಯನ್ನು ಸೇರಿ,


ನಿಮ್ಮ ದೇವರಾದ ಯೆಹೋವನು ಆದುಕೊಂಡ ಸ್ಥಳದಲ್ಲಿ ಇಸ್ರಾಯೇಲರೆಲ್ಲರು ಆತನ ಸನ್ನಿಧಿಗೆ ಕೂಡಿಬಂದಾಗ ನೀವು ಅವರೆಲ್ಲರಿಗೆ ಕೇಳಿಸುವಂತೆ ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.


ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ನಿಮ್ಮನ್ನು ಎಲ್ಲಾ ಕುಲಗಳೊಳಗಿಂದ ಆರಿಸಿಕೊಳ್ಳುವನು. ನೀವು ಆ ಸ್ಥಳದಿಂದ ಆತನು ಆರಿಸಿಕೊಳ್ಳುವ ಸ್ಥಳಕ್ಕೆ ಸೇರಿ ಬರಬೇಕು. ಅಲ್ಲೇ ಆತನು ವಾಸಿಸುವನು.


ನೀವು ವರ್ಷಕ್ಕೆ ಮೂರಾವರ್ತಿ ನನಗೆ ಹಬ್ಬಮಾಡಬೇಕು.


ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?


ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.


ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು?


“ನಿನ್ನ ದೇವರು ಎಲ್ಲಿ?” ಎಂದು ಜನರು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ, ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು