Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ನಿಮ್ಮ ಬೆಳೆಯ ಪ್ರಥಮ ಫಲದಲ್ಲಿ ಅತಿಶ್ರೇಷ್ಠವಾದುದ್ದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. "ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಉತ್ಕೃಷ್ಟವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಸುಗ್ಗಿ ಕಾಲದಲ್ಲಿ ನಿಮ್ಮ ಬೆಳೆಯ ಫಲವನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:19
20 ತಿಳಿವುಗಳ ಹೋಲಿಕೆ  

ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”


ಸತ್ತುಬಿದ್ದದ್ದನ್ನು ನೀವು ತಿನ್ನಬಾರದು; ನಿಮ್ಮ ಊರಲ್ಲಿರುವ ಪರದೇಶೀಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು. ನೀವಾದರೋ ನಿಮ್ಮ ದೇವರಾದ ಯೆಹೋವನಿಗೆ ಪ್ರತಿಷ್ಠಿತರಾದವರು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಆದುದರಿಂದ ಯೆಹೋವನೇ, ನೀನು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ, ಅದನ್ನು ಸ್ವೀಕರಿಸಬೇಕು” ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿಟ್ಟು ಆತನನ್ನು ಆರಾಧಿಸಬೇಕು.


ನಮ್ಮ ಭೂಮಿಯ ಬೆಳೆಗಳ ಮತ್ತು ಎಲ್ಲಾ ಹಣ್ಣಿನ ಮರಗಳ ಪ್ರಥಮ ಫಲಗಳನ್ನು ಪ್ರತಿ ವರ್ಷವೂ ಯೆಹೋವನ ಆಲಯಕ್ಕೆ ತಂದುಕೊಂಡುವೆವು.


ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.


ನಿಮ್ಮಲಿರುವ ಪ್ರತಿಯೊಬ್ಬನೂ ಆತನು ದಯಪಾಲಿಸಿದ ಹೊಲದ ಎಲ್ಲಾ ಬೆಳೆಗಳಲ್ಲಿ ಪ್ರಥಮಫಲಗಳನ್ನು ಪುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತರಬೇಕು.


ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.


ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.


ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ.


ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.


ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.


“‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.


ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ, ನಮ್ಮ ಪಶುಗಳ ಹಿಂಡುಗಳಲ್ಲಿ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಡೆದುಕೊಳ್ಳುವೆವು. ನಮ್ಮ ಚೊಚ್ಚಲ ಕರುಗಳನ್ನೂ, ಚೊಚ್ಚಲ ಆಡು, ಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡೆಸುತ್ತಿರುವ ಯಾಜಕರಿಗೆ ಕೊಡುವೆವು.


“ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದನ್ನು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.


ಮತ್ತು ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಒಂದು ಪಾಲು ಯಾಜಕರ ಪಾಲಿನ ಮೇರೆಯ ಪಕ್ಕದಲ್ಲಿ ಲೇವಿಯರಿಗೆ ಸಲ್ಲತಕ್ಕದ್ದು. ಈ ಎರಡು ಪಾಲುಗಳ ಒಟ್ಟು ಅಳತೆ ಎಷ್ಟೆಂದರೆ ಉದ್ದವು ಇಪ್ಪತ್ತೈದು ಸಾವಿರ ಮೊಳ ಮತ್ತು ಅಗಲವು ಇಪ್ಪತ್ತು ಸಾವಿರ ಮೊಳವಾಗಿದೆ.


ಆ ಕ್ಷೇತ್ರವು ಯೆಹೋವನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು ಮತ್ತು ಬದಲಾಯಿಸಲೂಬಾರದು. ದೇಶದ ಆ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವನಿಗೆ ಪರಿಶುದ್ಧವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು