Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿಮ್ಮಲ್ಲಿರುವ ಬಡವರ ನ್ಯಾಯಕೋರಿ ನಿಮ್ಮ ಬಳಿಗೆ ಬಂದಾಗ ನೀವು ಅನ್ಯಾಯವಾಗಿ ತೀರ್ಮಾನಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ನಿಮ್ಮಲ್ಲಿರುವ ಬಡವರು ನ್ಯಾಯಕೋರಿ ಬರುವಾಗ ಅವರಿಗೆ ನೀವು ನ್ಯಾಯ ತಪ್ಪಿಸಬಾರದು. ಮೋಸದ ಕಾರ್ಯದಿಂದ ದೂರವಿರಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿಮ್ಮಲ್ಲಿರುವ ಬಡವರು ವ್ಯಾಜ್ಯವಾಡಿದಾಗ ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು. ಮೋಸದ ಕಾರ್ಯಕ್ಕೆ ದೂರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಬಡವರಿಗೆ ವ್ಯಾಜ್ಯದಲ್ಲಿ ನೀವು ಅನ್ಯಾಯವಾದ ತೀರ್ಪನ್ನು ಕೊಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ತಪ್ಪಿಸಿ ತೀರ್ಪುಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:6
23 ತಿಳಿವುಗಳ ಹೋಲಿಕೆ  

“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಕೊಬ್ಬಿ ಢಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.


“ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು, ಪಕ್ಷಪಾತಮಾಡಬಾರದು, ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


“‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.


ಪರದೇಶಿಯನ್ನಾಗಲಿ, ಅನಾಥನನ್ನಾಗಲಿ ಅಥವಾ ವಿಧವೆಯನ್ನಾಗಲಿ ಹಿಂಸಿಸದೆ, ಈ ಸ್ಥಳದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸದೆ, ನಿಮಗೆ ಹಾನಿಕರವಾದ ಅನ್ಯದೇವತೆಗಳಲ್ಲಿ ಭಕ್ತಿ ಇಡದೆ ಇದ್ದರೆ,


ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಅವರು ತಾಮ್ರ ಮತ್ತು ಕಬ್ಬಿಣ, ಅವರೆಲ್ಲರೂ ಭ್ರಷ್ಟರೇ.


ಒಂದು ವೇಳೆ ನನಗೂ, ನನ್ನ ದಾಸನಿಗೂ, ಇಲ್ಲವೆ ದಾಸಿಗೂ ವ್ಯಾಜ್ಯವಾದಾಗ, ನಾನು ಅವರ ನ್ಯಾಯವನ್ನು ಅಲಕ್ಷ್ಯಮಾಡಿದ್ದರೆ


ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.


ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು, ನ್ಯಾಯವಿರುದ್ಧವಾದ ತೀರ್ಪು ಕೊಡುತ್ತಿದ್ದರು.


ದುಷ್ಟನಿಗೆ ಪ್ರಸನ್ನನಾಗಿ ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ.


ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ.


ಕುಡಿದರೆ ಅವರು ಧರ್ಮನಿಯಮಗಳನ್ನು ಮರೆತುಬಿಟ್ಟು, ಬಾಧೆಪಡುವವರೆಲ್ಲರ ನ್ಯಾಯವನ್ನು ವ್ಯತ್ಯಾಸಮಾಡುವರು.


ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು