Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ತೇಜಸ್ಸು ಸೀನಾಯಿ ಬೆಟ್ಟದ ಮೇಲೆ ನಿಂತಿತು. ಆ ಮೇಘವು ಆರು ದಿನಗಳವರೆಗೂ ಬೆಟ್ಟವನ್ನು ಆವರಿಸಿತ್ತು. ಏಳನೆಯ ದಿನ ಸರ್ವೇಶ್ವರ ಮೇಘ ಮಧ್ಯೆಯಿಂದ ಮೋಶೆಯನ್ನು ಕೂಗಿ ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನ ತೇಜಸ್ಸು ಸೀನಾಯಿ ಬೆಟ್ಟದ ಮೇಲೆ ನಿಂತಿತು, ಮತ್ತು ಆ ಮೇಘವು ಆರು ದಿನಗಳವರೆಗೂ ಬೆಟ್ಟವನ್ನು ಮುಚ್ಚಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿಂದ ಕೂಗಿ ಮೋಶೆಯನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸೀನಾಯಿ ಬೆಟ್ಟದ ಮೇಲೆ ಯೆಹೋವನ ಮಹಿಮೆಯು ಇಳಿದು ಬಂದಿತು. ಮೋಡವು ಆರುದಿನಗಳವರೆಗೆ ಬೆಟ್ಟವನ್ನು ಕವಿದುಕೊಂಡಿತ್ತು. ಏಳನೆಯ ದಿನದಲ್ಲಿ, ಮೋಡದೊಳಗಿಂದ ಯೆಹೋವನು ಮೋಶೆಯೊಡನೆ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಯೆಹೋವ ದೇವರ ಮಹಿಮೆಯು ಸೀನಾಯಿ ಬೆಟ್ಟದ ಮೇಲೆ ನೆಲೆಯಾಗಿದ್ದುದರಿಂದ ಮೇಘವು ಅದನ್ನು ಆರು ದಿನಗಳವರೆಗೆ ಮುಚ್ಚಿಕೊಂಡಿತು. ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:16
14 ತಿಳಿವುಗಳ ಹೋಲಿಕೆ  

ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.


ಸರ್ವಸಮೂಹದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಸೇರಿ ಬಂದಾಗ ದೇವದರ್ಶನದ ಗುಡಾರದ ಮೇಲೆ, ಮೇಘವು ಆವರಿಸಿಕೊಂಡಿತು ಮತ್ತು ಯೆಹೋವನ ತೇಜಸ್ಸು ಅಲ್ಲಿ ಕಾಣಿಸಿತು.


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.


ಆತನು ಮೇಘಸ್ತಂಭದಲ್ಲಿದ್ದು ಅವರೊಡನೆ ಮಾತನಾಡುತ್ತಿದ್ದನು; ಅವರು ಆತನ ವಿಧಿನಿಯಮಗಳನ್ನು ಕೈಕೊಂಡವರು.


ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರೆಲ್ಲರಿಗೂ ಕಾಣಿಸಿಕೊಂಡಿತು.


ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.


ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು.


ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.


ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.


ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.


ಆಗ ಮೋಶೆ ಅವರಿಗೆ, “ನೀವು ಏನು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು.


ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು