Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಮೋಶೆ ಬಟ್ಟಲುಗಳಲ್ಲಿದ್ದ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲ ಆಜ್ಞೆಗಳ ಪ್ರಕಾರ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತ ಇದೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ಮೋಶೆ ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿವಿುಕಿಸಿ - ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವು ಇದೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಮೋಶೆ ಯಜ್ಞಗಳ ರಕ್ತದಿಂದ ತುಂಬಿದ ಬೋಗುಣಿಯನ್ನು ತೆಗೆದುಕೊಂಡು ಅದರಲ್ಲಿದ್ದ ರಕ್ತವನ್ನು ಜನರ ಮೇಲೆ ಚಿಮಿಕಿಸಿ, “ಈ ಸುರುಳಿಯಲ್ಲಿರುವ ವಾಕ್ಯಗಳಿಗನುಸಾರವಾಗಿ ಯೆಹೋವನು ನಿಮ್ಮೊಡನೆ ಒಂದು ವಿಶೇಷ ಒಡಂಬಡಿಕೆಯನ್ನು ಮಾಡಿಕೊಂಡಿದ್ದಾನೆಂಬುದನ್ನು ಈ ರಕ್ತವು ಸೂಚಿಸುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ತರುವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಈ ಎಲ್ಲಾ ಮಾತುಗಳ ವಿಷಯದಲ್ಲಿ ಯೆಹೋವ ದೇವರು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:8
23 ತಿಳಿವುಗಳ ಹೋಲಿಕೆ  

ಅನಂತರ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ಒಡಂಬಡಿಕೆಯ ರಕ್ತ.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು.


ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವ ಒಡಂಬಡಿಕೆಯ ರಕ್ತ.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.


ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.


ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.


ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.


ಆಗ ಮೋಶೆ ಅಭಿಷೇಕತೈಲದಲ್ಲಿ ಮತ್ತು ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಹಾಗೂ ಅವನ ವಸ್ತ್ರಗಳ ಮೇಲೆಯೂ, ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಿದನು. ಹೀಗೆ ಆರೋನನನ್ನು ಅವನ ವಸ್ತ್ರಗಳನ್ನು, ಅವನ ಮಕ್ಕಳನ್ನು ಮತ್ತು ಅವರ ವಸ್ತ್ರಗಳನ್ನು ಪ್ರತಿಷ್ಠಿಸಿದನು.


ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?


ಹೀಗೆ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೆಲವು ನಿಬಂಧನೆಗಳನ್ನು ವಿಧಿಸಿದನು.


ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.


ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ, ತಮ್ಮ ನಾಲಿಗೆಯಿಂದ ಸುಳ್ಳಾಡಿದರು.


ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.


ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು.


ಇದಲ್ಲದೆ ಐಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು” ಎಂದು ಹೇಳಿದನು.


ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು