Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಹುರಿನಾರಿನ ಬಟ್ಟೆಯಲ್ಲಿ ನೀಲಿ, ಧೂಮ್ರ, ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಕಲಾತ್ಮಕವಾಗಿ ಕಸೂತಿಹಾಕಿ ಒಂದು ತೆರೆಯ ಚಿತ್ರವನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಪವಿತ್ರಗುಡಾರದ ಒಳಭಾಗವನ್ನು ವಿಂಗಡಿಸಲು ಉತ್ತಮವಾದ ಹುರಿನಾರಿನ ಬಟ್ಟೆಯಿಂದ ಒಂದು ವಿಶೇಷ ಪರದೆಯನ್ನು ಮಾಡಿಸಬೇಕು. ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಪರದೆಯ ಮೇಲೆ ಕೆರೂಬಿಗಳ ಚಿತ್ರಗಳನ್ನು ಕಸೂತಿಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಬೇಕು. ಅದರ ಮೇಲೆ ಕೌಶಲ್ಯದಿಂದ ಕಸೂತಿಹಾಕಿ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:31
30 ತಿಳಿವುಗಳ ಹೋಲಿಕೆ  

ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;


ಸೊಲೊಮೋನನು ಪರದೆಯನ್ನು ನೀಲ, ಧೂಮ್ರ, ರಕ್ತವರ್ಣಗಳುಳ್ಳ ನಯವಾದ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳ ಕಸೂತಿಯನ್ನು ಹಾಕಿಸಿದನು.


ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕೆರೂಬಿಗಳಿಗೆ ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು.


“ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರವಾದ ಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವುದರಿಂದ ಅವನು ನಾಶವಾಗುವನು.


ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.


ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.


ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ.


ಆಗ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.


ರಾಜಪುತ್ರಿಯೇ, ಪಾದರಕ್ಷೆಗಳಲ್ಲಿನ ನಿನ್ನ ಪಾದಗಳು ಎಷ್ಟೋ ಅಂದ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಯು ಮಾಡಿದ ಆಭರಣಗಳಂತಿವೆ.


ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ.


“ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು.


ಮೋಶೆಯು ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ಪರದೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.


ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು.


ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗು ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು.


ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”


ನಿಪುಣೆಯರಾದ ಸ್ತ್ರೀಯರು ತಮ್ಮ ಕೈಗಳಿಂದ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲನ್ನೂ, ಹತ್ತಿಯ ನೂಲನ್ನೂ ನೇಯ್ದು ಆ ನೂಲನ್ನು ತಂದುಕೊಟ್ಟರು.


ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಗಳು, ಉಣ್ಣೆಯ ಬಟ್ಟೆಗಳು,


ನ್ಯಾಯತೀರ್ಪಿನ ಎದೆಯ ಪದಕದ ಕವಚವನ್ನು ಕಸೂತಿ ಕೆಲಸದಿಂದ ಮಾಡಿಸಬೇಕು. ಅದನ್ನು ಏಫೋದ್ ಅನ್ನು ಮಾಡಿಸಿದ ಹಾಗೆಯೇ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಬೇಕು.


ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.


ನೀಲಿ, ನೇರಳೆ, ರಕ್ತಗೆಂಪು ವರ್ಣಗಳುಳ್ಳ ದಾರಗಳೂ, ನಾರುಬಟ್ಟೆಗಳೂ, ಆಡು ಕೂದಲಿನ ಉಣ್ಣೆಯ ಬಟ್ಟೆಗಳೂ,


ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ಪರದೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.


ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.


ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ ನಾಲ್ಕು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಎರಕಹೊಯಿಸಿದರು.


ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆಯೂ ಇರಬೇಕು. ಅದನ್ನು ನಯವಾಗಿ ಹೊಸೆದ ನಾರಿನ ನೂಲು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ಗದ್ದಿಗೆ ಕಲ್ಲುಗಳು ಇರಬೇಕು.


ಆಜ್ಞಾಶಾಸನಗಳ ಮಂಜೂಷ, ಅದನ್ನು ಹೊರುವ ಕಂಬಗಳು, ಕೃಪಾಸನ, ಅದನ್ನು ಮರೆಮಾಡುವ ಪರದೆ,


ದಂಡು ಹೊರಡುವಾಗ, ಆರೋನನೂ ಮತ್ತು ಅವನ ಮಕ್ಕಳೂ ಒಳಗೆ ಬಂದು ಮಹಾಪವಿತ್ರಸ್ಥಾನವನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಮಂಜೂಷದ ಆಜ್ಞಾಶಾಸನವನ್ನು ಮುಚ್ಚಿಬಿಟ್ಟು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು