Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮುದ್ರೆಗಳನ್ನು ಕೆತ್ತುವ ಹಾಗೆ ಆ ಶಿಲ್ಪಿಗರಿಂದ ಎರಡೂ ರತ್ನಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ, ಅದಕ್ಕೆ ಚಿನ್ನವನ್ನು ಆ ಮುದ್ರೆಗಳ ಮೇಲೆ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮುದ್ರಾ, ರತ್ನವನ್ನು ಕೆತ್ತುವಂತೆ, ಈ ಎರಡು ರತ್ನಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮುದ್ರಾರತ್ನವನ್ನು ಕೆತ್ತುವ ರೀತಿಯಲ್ಲಿ ಆ ಎರಡು ರತ್ನಗಳಲ್ಲಿ ಇಸ್ರಾಯೇಲ್ಯರ ಕುಲಗಳ ಹೆಸರುಗಳನ್ನು ಕೆತ್ತಿಸಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಈ ಕಲ್ಲುಗಳ ಮೇಲೆ ಇಸ್ರೇಲನ ಗಂಡುಮಕ್ಕಳ ಹೆಸರನ್ನು ಕೆತ್ತಿಸು. ಒಬ್ಬ ಕೆಲಸಗಾರನು ಮುದ್ರೆಯನ್ನು ಮಾಡುವ ರೀತಿಯಲ್ಲಿ ಇದನ್ನು ಮಾಡಿಸು. ಚಿನ್ನದ ಕುಂದಣದಲ್ಲಿ ರತ್ನಗಳನ್ನಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಶಿಲ್ಪಿಗನು ಕಲ್ಲಿನ ಮೇಲೆ ಮುದ್ರೆ ಕೆತ್ತುವ ಪ್ರಕಾರ, ಆ ಎರಡೂ ರತ್ನಗಳ ಮೇಲೆ ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಕೆತ್ತಿಸಿ, ಅವುಗಳನ್ನು ಬಂಗಾರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:11
16 ತಿಳಿವುಗಳ ಹೋಲಿಕೆ  

ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡಿದುಕೊಂಡು ಮೂಡಣದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನುಂಟುಮಾಡಲು ಅನುಮತಿ ಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ,


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.


ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿರಿ; ಆ ಒಂದೇ ಕಲ್ಲಿನಲ್ಲಿ ಏಳು ಕಣ್ಣುಳ್ಳಾತನ ದೃಷ್ಟಿಯು ಬಿದ್ದಿದೆ; ಇಗೋ ನಾನೇ ಅದರಲ್ಲಿ ಕೆತ್ತನೆ ಕೆತ್ತುವೆನು. ಇದು ಸೇನಾಧೀಶ್ವರನಾದ ಯೆಹೋವನ ನುಡಿ. ‘ಒಂದೇ ದಿನದೊಳಗೆ ಈ ದೇಶದ ಪಾಪವನ್ನು ಪರಿಹರಿಸುವೆನು.’


ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!


ಹೆಣಿಗೇಕೆಲಸದ ಆ ಸರಪಣಿಗಳ ಅಂಚುಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಬಳೆಗಳ ಮುಂಭಾಗಕ್ಕೆ ಜೋಡಿಸಿದರು.


ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ ಮತ್ತು ವೈಡೂರ್ಯಗಳು ಇದ್ದವು. ಈ ರತ್ನಗಳನ್ನು ಕುಂದಣಗಳಲ್ಲಿ ಇರಿಸಿದರು.


ಮುದ್ರಾಕ್ಷವನ್ನು ಕೆತ್ತುವ ರೀತಿಯಲ್ಲಿ ಗೋಮೇಧಕರತ್ನಗಳಲ್ಲಿ ಇಸ್ರಾಯೇಲನ ಹನ್ನೆರಡು ಮಕ್ಕಳ ಹೆಸರುಗಳನ್ನು ಕೆತ್ತಿ ಆ ರತ್ನಗಳನ್ನು ಕುಂದಣದಲ್ಲಿ ಹಚ್ಚಿದರು.


ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಲಿಪಿಯನ್ನು ಕೆತ್ತಿಸಬೇಕು.


ಆ ಸರಪಣಿಗಳ ಕೊನೆಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಕೊಂಡಿಗಳಲ್ಲಿ ಸಿಕ್ಕಿಸಿ ಮುಂಭಾಗದಲ್ಲಿರಿಸಬೇಕು.


ಇಸ್ರಾಯೇಲರ ಕುಲಗಳ ಸಂಖ್ಯೆಗೆ ಅನುಗುಣವಾಗಿ ಹನ್ನೆರಡು ರತ್ನಗಳಿರಬೇಕು. ಮುದ್ರೆಗಳನ್ನು ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.


ಒಂದು ರತ್ನದಲ್ಲಿ ಆರು ಹೆಸರುಗಳನ್ನೂ ಮತ್ತೊಂದು ರತ್ನದಲ್ಲಿ ಮಿಕ್ಕ ಆರು ಹೆಸರುಗಳನ್ನು ಅವರವರ ಜನನ ಕ್ರಮದ ಪ್ರಕಾರ ಕೆತ್ತಿಸಬೇಕು.


ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಏಫೋದಿನ ಪಟ್ಟಿಗಳಲ್ಲಿ ಹಾಕಿಸಬೇಕು. ಅವು ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಯಲ್ಲಿ ಹೋಗುವಾಗೆಲ್ಲಾ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವುದಕ್ಕಾಗಿ ತನ್ನ ಎರಡೂ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಹೋಗುವನು.


ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸ ಎರೆದು, ಶಾಶ್ವತ ಶಾಸನವಾಗಿ ಮಾಡಿದರೆ ನನಗೆ ಎಷ್ಟೋ ಉಪಕಾರ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು