Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯಾರಿಗೆ ನಾನು ಜ್ಞಾನದ ವರವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥ ಜ್ಞಾನಿಗಳೆಲ್ಲರ ಸಂಗಡ ನೀನು ಮಾತನಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯಾರಿಗೆ ನಾನು ಕಲಾಕುಶಲತೆಯನ್ನು ಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥವರೊಡನೆ ಚರ್ಚಿಸಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕ ಸೇವೆಗೆ ಪ್ರತಿಷ್ಠಿತನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯಾರಿಗೆ ನಾನು ಜಾಣತನದ ವರವನ್ನು ಪರಿಪೂರ್ತಿಯಾಗಿ ಅನುಗ್ರಹಿಸಿದ್ದೇನೋ ಅಂಥ ಜಾಣರೆಲ್ಲರ ಸಂಗಡ ನೀನು ಮಾತಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವದಕ್ಕೆ ಪ್ರತಿಷ್ಠಿತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಈ ಬಟ್ಟೆಗಳನ್ನು ಮಾಡುವಂಥ ಕೆಲವು ನಿಪುಣರಿದ್ದಾರೆ. ನಾನು ಅವರಿಗೆ ವಿಶೇಷ ಜ್ಞಾನವನ್ನು ಕೊಟ್ಟಿದ್ದೇನೆ. ಆರೋನನಿಗೆ ಬೇಕಾದ ಬಟ್ಟೆಗಳನ್ನು ಮಾಡಲು ಅವರಿಗೆ ಹೇಳು. ಅವನು ವಿಶೇಷವಾದ ರೀತಿಯಲ್ಲಿ ನನ್ನ ಸೇವೆಮಾಡುತ್ತಾನೆಂದು ಈ ಬಟ್ಟೆಗಳು ತೋರಿಸುತ್ತವೆ. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ನಾನು ಜ್ಞಾನದ ಆತ್ಮದಿಂದ ತುಂಬಿದ ವಿವೇಕದ ಹೃದಯವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:3
16 ತಿಳಿವುಗಳ ಹೋಲಿಕೆ  

ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.


ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.


ಮೋಶೆಯು ನೂನನ ಮಗನಾದ ಯೆಹೋಶುವನ ಮೇಲೆ ಕೈಯಿಟ್ಟಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಯೆಹೋವನು ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರವಾಗಿ ಇಸ್ರಾಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.


ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.


ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”


ಮೋಶೆಯು ಇಸ್ರಾಯೇಲ್ಯರಿಗೆ ಹೀಗೆಂದನು, “ನೋಡಿರಿ, ಯೆಹೋವನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಹೆಸರು ಹಿಡಿದು ಕರೆದಿದ್ದಾನೆ.


ನಿಪುಣೆಯರಾದ ಸ್ತ್ರೀಯರು ತಮ್ಮ ಕೈಗಳಿಂದ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲನ್ನೂ, ಹತ್ತಿಯ ನೂಲನ್ನೂ ನೇಯ್ದು ಆ ನೂಲನ್ನು ತಂದುಕೊಟ್ಟರು.


ಕಲಾತ್ಮಕವಾದ ವಿನ್ಯಾಸಗಳನ್ನು ಕಲ್ಪಿಸುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,


“ಬೆಚಲೇಲನು ಹಾಗೂ ಒಹೋಲೀಯಾಬನು ಮತ್ತು ಬೇರೆ ಜ್ಞಾನಿಗಳೆಲ್ಲರು ಅಂದರೆ ಯೆಹೋವನಿಂದ ಜ್ಞಾನವಿವೇಕಗಳನ್ನು ಹೊಂದಿ ಪವಿತ್ರ ದೇವಮಂದಿರವನ್ನು ನಿರ್ಮಾಣ ಮಾಡುವ ಕೆಲಸಕ್ಕಾಗಿ ಬೇಕಾದ ಸಕಲವಿಧವಾದ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಯೆಹೋವನು ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ ಮಾಡುವರು” ಅಂದನು.


ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.


“ನಿಮ್ಮಲ್ಲಿರುವ ಜ್ಞಾನಿಗಳಾದ ಶಿಲ್ಪಿಗಳು ಬಂದು ಯೆಹೋವನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು.


ಬೆಚಲೇಲನನ್ನೂ ಒಹೋಲೀಯಾಬನನ್ನೂ ಮತ್ತು ಯಾರ ಹೃದಯದಲ್ಲಿ ಯೆಹೋವನು ಜ್ಞಾನವನ್ನು ಕೊಟ್ಟಿದ್ದನೋ, ಯಾರಾರಿಗೆ ಈ ಕೆಲಸಮಾಡುವುದಕ್ಕೆ ಹೃದಯದಲ್ಲಿ ಪ್ರೇರಣೆಯಾಯಿತೋ ಅಂಥ ಜ್ಞಾನಿಗಳೆಲ್ಲರನ್ನೂ ಮೋಶೆಯು ತನ್ನ ಹತ್ತಿರಕ್ಕೆ ಕರೆಯಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು