Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹುಳಿಯಿಲ್ಲದ ರೊಟ್ಟಿಗಳನ್ನು ಎಣ್ಣೆಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು ಹಾಗು ಎಣ್ಣೆ ಹೊಯಿದು ಹುಳಿಯಿಲ್ಲದ ಕಡುಬುಗಳನ್ನು ಗೋದಿ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ವಿುಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹೊಯಿದ ಹುಳಿಯಿಲ್ಲದ ಕಡುಬುಗಳನ್ನೂ ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬಳಿಕ ಹುಳಿಯಿಲ್ಲದ ರೊಟ್ಟಿಯನ್ನೂ ಆಲಿವ್ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಾಕಿದ ತೆಳುವಾದ ಕಡುಬುಗಳನ್ನೂ ಗೋಧಿಹಿಟ್ಟಿನಿಂದ ಮಾಡಿಸಿ ಒಂದೇ ಬುಟ್ಟಿಯಲ್ಲಿ ತುಂಬಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅತ್ಯುತ್ತಮ ಗೋಧಿಯ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ಹೊಯ್ದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಚ್ಚಿದ ಹುಳಿಯಿಲ್ಲದ ಪೂರಿಗಳನ್ನೂ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:2
14 ತಿಳಿವುಗಳ ಹೋಲಿಕೆ  

ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.


ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.


ತರುವಾಯ ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಪುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು, ಹಾಗೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಅರ್ಪಿಸಬೇಕು.


ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು.


“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,


ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.


ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ ಅಥವಾ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮಾನವಾಗಿ ಅನುಭವಿಸಬೇಕು.


ಅದು ಧಾನ್ಯನೈವೇದ್ಯ ವಸ್ತುವಾದ್ದರಿಂದ ನೀವು ಅದರ ಮೇಲೆ ಎಣ್ಣೆ ಹೊಯ್ದು ಧೂಪವಿಡಬೇಕು.


ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಮತ್ತು ಒಂದು ಕಡುಬನ್ನು ತೆಗೆದುಕೊಂಡು,


ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.


ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು. ಆ ನಂತರ ಆ ಪುಟ್ಟಿಯನ್ನು, ಹೋರಿಯನ್ನು ಮತ್ತು ಎರಡು ಟಗರುಗಳೊಂದಿಗೆ ತರಬೇಕು.


ಬೆಂಕಿಯು ಯಜ್ಞವೇದಿಯ ಮೇಲೆ ಯಾವಾಗಲೂ ಉರಿಯುತ್ತಿರಬೇಕು; ಆರಿಹೋಗಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು