Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ಕಾಣಿಕೆಯಾಗಿ ಆರತಿ ಮಾಡಿಸಿದ ಎದೆಯ ಭಾಗವನ್ನು ಮತ್ತು ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ಅದರ ತೊಡೆಯನ್ನು ದೇವರದೆಂದು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ ಆರೋನನನ್ನು ಮಹಾಯಾಜಕನನ್ನಾಗಿ ಮಾಡಲು ನಿವಾಳಿಸಲ್ಪಟ್ಟ ಟಗರಿನ ಎದೆಯ ಭಾಗವನ್ನೂ ಯಾಜಕರ ಭಾಗವಾದ ನಿವಾಳಿಸಲ್ಪಟ್ಟ ಟಗರಿನ ತೊಡೆಯನ್ನೂ ತೆಗೆದುಕೊ. ಅವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಇದು ಕಾಣಿಕೆಯ ವಿಶೇಷ ಭಾಗವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ನೀನು ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಣೆ ಮಾಡಿದ ಬಲದ ಮುಂದೊಡೆಯನ್ನೂ, ಆರೋನನ, ಅವನ ಪುತ್ರರಿಗೆ ಸಲ್ಲಬೇಕಾದ ಪ್ರತಿಷ್ಠಿತ ಟಗರಿನ ಭಾಗವನ್ನು ಪ್ರತಿಷ್ಠಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:27
14 ತಿಳಿವುಗಳ ಹೋಲಿಕೆ  

“ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.


ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನು ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನು ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ಮತ್ತು ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ” ಎಂದು ಹೇಳಿದನು.


ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.


ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ.


ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.


ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನು ಮತ್ತು ಬಲತೊಡೆಯನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.


ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ ಮತ್ತು ಸಮಾಧಾನಯಜ್ಞ ಎಂಬ ಯಜ್ಞಗಳ ವಿಷಯದಲ್ಲಿ ಮೇಲೆ ಹೇಳಿದ ನಿಯಮಗಳನ್ನು ಅನುಸರಿಸಬೇಕು.


ಮತ್ತು ಆರೋನನ ಪಟ್ಟಾಭೀಷೇಕಕ್ಕಾಗಿ ಪ್ರತಿಷ್ಠಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲಾಗಿರುತ್ತದೆ.


ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.


ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವುದಕ್ಕಾಗಿ ತಂದು ಸಮರ್ಪಿಸಬೇಕು.


ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಆಗ ಸಮುವೇಲನು, “ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು, ಯಾಕೆಂದರೆ ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು” ಎಂದು ಸೌಲನಿಗೆ ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು