Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಪ್ರತಿಷ್ಠೆಗೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದ ವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ಪವಿತ್ರವಾದುದರಿಂದ ಯಾರೂ ಅದನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಯಾಜಕಾಭಿಷೇಕಕ್ಕೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ದೇವರ ವಸ್ತುವಾದುದರಿಂದ ಯಾರೂ ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಪಟ್ಟಾಭಿಷೇಕಕ್ಕೆ ಸಂಬಂಧಪಟ್ಟ ಮಾಂಸದಲ್ಲಿಯಾಗಲಿ ರೊಟ್ಟಿಯಲ್ಲಿಯಾಗಲಿ ಏನಾದರೂ ಮರುದಿನದ ಉದಯದವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು; ಅದು ದೇವರ ವಸ್ತುವಾದದರಿಂದ ಯಾರೂ ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಟಗರಿನ ಮಾಂಸ ಅಥವಾ ರೊಟ್ಟಿಯೇನಾದರೂ ಮರುದಿನ ಮುಂಜಾನೆಯವರೆಗೆ ಉಳಿದರೆ, ಅದನ್ನು ಸುಟ್ಟುಬಿಡಬೇಕು. ನೀವು ಆ ರೊಟ್ಟಿಯನ್ನಾಗಲಿ ಮಾಂಸವನ್ನಾಗಲಿ ತಿನ್ನಬಾರದು. ಯಾಕೆಂದರೆ ಅದನ್ನು ವಿಶೇಷವಾದ ಸಂದರ್ಭದಲ್ಲಿ ವಿಶೇಷವಾದ ರೀತಿಯಲ್ಲಿ ಮಾತ್ರ ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಪ್ರತಿಷ್ಠೆ ಬಲಿ ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಡಬೇಕು. ಅದು ಪರಿಶುದ್ಧವಾಗಿರುವುದರಿಂದ ಅದನ್ನು ಮರುದಿನ ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:34
10 ತಿಳಿವುಗಳ ಹೋಲಿಕೆ  

ಆ ಮಾಂಸದಲ್ಲಿಯೂ, ಭಕ್ಷ್ಯಗಳಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು.


ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ಉಳಿಸಕೂಡದು, ಬೆಳಗಿನವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಜನರೆಲ್ಲರಿಗೋಸ್ಕರ ದೋಷಪರಿಹಾರ ಮಾಡಲು ಸಮರ್ಪಿತವಾದ ಹೋತದ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು,


ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.


ಮತ್ತು ಆರೋನನ ಪಟ್ಟಾಭೀಷೇಕಕ್ಕಾಗಿ ಪ್ರತಿಷ್ಠಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲಾಗಿರುತ್ತದೆ.


ಪ್ರತಿಷ್ಠೆಗಾಗಿ ಸಮರ್ಪಿಸಲ್ಪಟ್ಟ ಟಗರಾಗಿರುವುದರಿಂದ ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಪಿತ್ತಕೋಶದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಕೋಶಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಹಾಗೂ ಬಲತೊಡೆಯನ್ನು,


ಅದಲ್ಲದೆ ಮೋಶೆ ಅವರಿಗೆ, “ಇದನ್ನು ಯಾರೂ ಮರು ದಿನದವರೆಗೆ ಇಟ್ಟುಕೊಳ್ಳಬಾರದು” ಎಂದು ಹೇಳಿದನು.


ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ಕೊಬ್ಬನ್ನು ಮರುದಿನದವರೆಗೆ ಇಡಲೇಬಾರದು.


“ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದ ಸೂರ್ಯೋದಯದವರೆಗೂ ಉಳಿಸಿಕೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು