Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿಮಿತ್ತವಾಗಿ ದೋಷಪರಿಹಾರಕ ಆಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿ ಪರಿಶುದ್ಧವಾಗಿರಬೇಕು. ಯಜ್ಞವೇದಿಯನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಹೀಗೆ ಏಳು ದಿನಗಳವರೆಗೆ ಬಲಿಪೀಠದ ನಿಮಿತ್ತ ಪಾಪಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪ್ರತಿಷ್ಠಾಪಿಸು. ಬಲಿಪೀಠವು ಅತಿಶುದ್ಧವಾಗಿರಬೇಕು. ಅದನ್ನು ಸೋಕಿದ್ದೆಲ್ಲವು ಪರಿಶುದ್ಧವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿವಿುತ್ತವಾಗಿ ದೋಷಪರಿಹಾರಕಾಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿಪರಿಶುದ್ಧವಾಗಿರಬೇಕು; ಯಜ್ಞವೇದಿಗೆ ಸೋಂಕಿದ್ದೆಲ್ಲವು ಪರಿಶುದ್ಧವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಹೀಗೆ ಏಳು ದಿನಗಳವರೆಗೆ ಯಜ್ಞವೇದಿಕೆಯನ್ನು ಶುದ್ಧಗೊಳಿಸಿ ಪವಿತ್ರಗೊಳಿಸಬೇಕು. ಆ ಸಮಯದಲ್ಲಿ ಯಜ್ಞವೇದಿಕೆಯು ಮಹಾಪವಿತ್ರವಾಗಿರುವುದು. ಯಜ್ಞವೇದಿಕೆಗೆ ಸೋಂಕಿದ ವಸ್ತುಗಳೆಲ್ಲವೂ ಪವಿತ್ರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಏಳು ದಿವಸ ಬಲಿಪೀಠಕ್ಕೊಸ್ಕರ ಪ್ರಾಯಶ್ಚಿತ್ತ ಮಾಡಿ, ಅದನ್ನು ಪವಿತ್ರ ಮಾಡಬೇಕು. ಆಗ ಬಲಿಪೀಠವು ಅತಿ ಪರಿಶುದ್ಧವಾಗಿರುವುದು. ಬಲಿಪೀಠವನ್ನು ಮುಟ್ಟುವುದೆಲ್ಲಾ ಪವಿತ್ರವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:37
12 ತಿಳಿವುಗಳ ಹೋಲಿಕೆ  

ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಸರ್ವಾಂಗಹೋಮ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು.


ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ?


ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?


ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.


ಹೀಗೆ ಇಸ್ರಾಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಅವನು ಹಾಗೆಯೇ ದೋಷಪರಿಹಾರ ಮಾಡುವನು.


ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.


ಅನಂತರ ಆ ವಸ್ತ್ರಗಳನ್ನು ತೆಗೆದಿಟ್ಟು, ಬೇರೆ ವಸ್ತ್ರಗಳನ್ನು ಹಾಕಿಕೊಂಡು, ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ತರುವಾಯ ಎಂಟನೆಯ ದಿನದಲ್ಲಿ ಪರಿಶುದ್ಧ ಸಭೆ ನಡಿಸಿದರು. ಹೀಗೆ ಏಳು ದಿನ ಯಜ್ಞವೇದಿಯ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿನ ಜಾತ್ರೆಯ ಹಬ್ಬವನ್ನು ಆಚರಿಸಿದರು.


ಆಮೇಲೆ ಅದರ ರಕ್ತದಲ್ಲಿ ಸ್ವಲ್ಪವನ್ನು ನೀನು ತೆಗೆದುಕೊಂಡು ಯಜ್ಞವೇದಿಯ ನಾಲ್ಕು ಕೊಂಬುಗಳಿಗೂ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ, ಸುತ್ತಣ ದಿಂಡಿಗೂ ಹಚ್ಚಿ, ಯಜ್ಞವೇದಿಯ ದೋಷವನ್ನು ಪರಿಹರಿಸಿ ಅದನ್ನು ಶುದ್ಧಿಮಾಡು.


“ಏಳು ದಿನಗಳ ತನಕ ನೀನು ಪ್ರತಿ ದಿನವೂ ದೋಷಪರಿಹಾರ ಬಲಿಗಾಗಿ ಒಂದೊಂದು ಹೋತವನ್ನು ಸಿದ್ಧಮಾಡಬೇಕು. ಯಾಜಕರು ಸಹ ದೋಷವಿಲ್ಲದ ಪೂರ್ಣಾಂಗವಾದ ಹೋರಿಯನ್ನೂ ಹಿಂಡಿನಿಂದಲೂ ಮತ್ತು ಪೂರ್ಣಾಂಗವಾದ ಟಗರನ್ನೂ ಮಂದೆಯೊಳಗಿಂದಲೂ ಸಿದ್ಧಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು