Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವುಗಳಲ್ಲಿ ಒಂದನ್ನು ಉದಯಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅವುಗಳಲ್ಲಿ ಒಂದನ್ನು ಬೆಳಿಗ್ಗೆ ಮತ್ತೊಂದನ್ನು ಸಂಜೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅವುಗಳಲ್ಲಿ ಒಂದನ್ನು ಪ್ರಾತಃಕಾಲದಲ್ಲಿ ಮತ್ತೊಂದನ್ನು ಸಾಯಂಕಾಲದಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಮುಂಜಾನೆ ಒಂದು ಕುರಿಮರಿಯನ್ನು ಮತ್ತು ಸಾಯಂಕಾಲ ಮತ್ತೊಂದು ಕುರಿಮರಿಯನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಒಂದು ಕುರಿಮರಿಯನ್ನು ಮುಂಜಾನೆಯಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:39
15 ತಿಳಿವುಗಳ ಹೋಲಿಕೆ  

ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು.


ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.


ಧೂಪವನ್ನು ಅರ್ಪಿಸುವ ಹೊತ್ತಿನಲ್ಲಿ ಜನಸಮೂಹದವರೆಲ್ಲರು ಹೊರಗೆ ನಿಂತು ಪ್ರಾರ್ಥಿಸುತ್ತಿರಲಾಗಿ,


ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.


ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.


ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.


ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.


ಮುಂಜಾನೆ ವೇಳೆಯಲ್ಲಿ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಪಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ದೇಶದಲ್ಲೆಲ್ಲಾ ತುಂಬಿಕೊಂಡಿತು.


ಇಸ್ರಾಯೇಲ್ ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು.


ನನ್ನ ಪ್ರಾರ್ಥನೆಯು ಧೂಪದಂತೆಯೂ, ನಾನು ಕೈಯೆತ್ತುವುದು ಸಂಧ್ಯಾನೈವೇದ್ಯದಂತೆಯೂ ನಿನಗೆ ಸಮರ್ಪಕವಾಗಲಿ.


ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು.


ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು, ಆ ದಿನದ ಸಂಜೆ ವೇಳೆಯಲ್ಲಿ ಇಸ್ರಾಯೇಲರ ಸಮೂಹದವರೆಲ್ಲರೂ ಒಟ್ಟಿಗೆ ಸೇರಿ ಅವುಗಳನ್ನು ವಧಿಸಬೇಕು.


ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು