Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅಲ್ಲಿಯೇ ನಾನು ಇಸ್ರಾಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ತೇಜಸ್ಸಿನಿಂದ ಆ ಸ್ಥಳವು ಪರಿಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅಲ್ಲಿಯೇ ನಾನು ಇಸ್ರಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ಪ್ರಭಾವದಿಂದ ಆ ಸ್ಥಳವು ಪರಿಶುದ್ಧವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಅಲ್ಲಿಯೇ ನಾನು ಇಸ್ರಾಯೇಲ್ಯರಿಗೆ ದರ್ಶನವನ್ನು ಕೊಡುವೆನು; ಅಲ್ಲಿ ಕಾಣಿಸುವ ನನ್ನ ಪ್ರಭಾವದಿಂದ ಆ ಸ್ಥಳವು ಪರಿಶುದ್ಧವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆ ಸ್ಥಳದಲ್ಲಿ ನಾನು ಇಸ್ರೇಲರನ್ನು ಸಂಧಿಸುವೆನು. ನನ್ನ ಪ್ರಭಾವದಿಂದ ಆ ಸ್ಥಳವು ಪವಿತ್ರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅಲ್ಲಿ ನಾನು ಇಸ್ರಾಯೇಲರನ್ನು ಸಂಧಿಸುವೆನು. ಅದು ನನ್ನ ಮಹಿಮೆಯಿಂದ ಪವಿತ್ರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:43
20 ತಿಳಿವುಗಳ ಹೋಲಿಕೆ  

ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆದು ತಂದಿತು. ಆಗ ಯೆಹೋವನ ಮಹಿಮೆಯು ಆಲಯವನ್ನು ತುಂಬಿಕೊಂಡಿತು.


ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡಿದ್ದ ಮೇಘವು ದೇವಾಲಯದಲ್ಲಿ ತುಂಬಿಕೊಂಡಿದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.


ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.


ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.


ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.


ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು.


ನಾನು ದೇವದರ್ಶನದ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಗೊಳಿಸುವೆನು. ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ನನಗೆ ಯಾಜಕ ಸೇವೆ ಮಾಡುವಂತೆ ಶುದ್ಧೀಕರಿಸುವೆನು.


ಕುರಿಯನ್ನು ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನು, ಟಗರನ್ನು ಧಾನ್ಯನೈವೇದ್ಯಕ್ಕಾಗಿ ಎಣ್ಣೆಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಯೆಹೋವನ ಮುಂದೆ ಬರಬೇಕೆಂದು ಆಜ್ಞಾಪಿಸು’” ಅಂದನು.


ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.


ಆಗ ಮೋಶೆ ಅವರಿಗೆ, “ನೀವು ಏನು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು.


ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು