Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದುದರಿಂದ ಈಗ ಬಾ, ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಹೊರಗೆ ಬರಮಾಡುವುದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದ್ದರಿಂದ ಹೋಗು; ನನ್ನ ಜನರಾಗಿರುವ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರತರುವುದಕ್ಕಾಗಿ ನಿನ್ನನ್ನು ಫರೋಹನ ಬಳಿಗೆ ಕಳಿಸುತ್ತಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ನನ್ನ ಜನರಾಗಿರುವ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಹೊರಗೆ ಬರ ಮಾಡುವದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ ಬಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತಿದ್ದೇನೆ. ಹೋಗು! ನನ್ನ ಜನರಾದ ಇಸ್ರೇಲರನ್ನು ಈಜಿಪ್ಟಿನಿಂದ ಬಿಡುಗಡೆ ಮಾಡು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲರಾದ ನನ್ನ ಜನರನ್ನು ನೀನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:10
20 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.


ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ, ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು.


ಆಗ ಸಮುವೇಲನು, “ನಿಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರೆತರುವುದಕ್ಕಾಗಿ ಮೋಶೆ ಹಾಗೂ ಆರೋನರನ್ನು ನೇಮಿಸಿದ ಯೆಹೋವನೇ ಇದಕ್ಕೆ ಸಾಕ್ಷಿ.


ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು.


ಕುರುಬನು ಕುರಿಹಿಂಡನ್ನು ಹೇಗೋ, ಹಾಗೆಯೇ ನೀನು ಮೋಶೆ ಮತ್ತು ಆರೋನರ ಮುಖಾಂತರ, ನಿನ್ನ ಪ್ರಜೆಯನ್ನು ಮುನ್ನಡೆಸಿದಿ.


ಅವನೇ ಐಗುಪ್ತ ದೇಶದಲ್ಲಿಯೂ, ಕೆಂಪು ಸಮುದ್ರದಲ್ಲಿಯೂ, ನಲವತ್ತು ವರ್ಷ ಮರುಭೂಮಿಯಲ್ಲಿಯೂ, ಅದ್ಭುತಕಾರ್ಯಗಳನ್ನೂ ಸೂಚಕ ಕಾರ್ಯಗಳನ್ನೂ ಮಾಡುತ್ತಾ ಅವರನ್ನು ನಡೆಸಿಕೊಂಡು ಬಂದನು.


ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು.


ಇದಲ್ಲದೆ ದೇವರು ಹೇಳಿದ್ದೇನಂದರೆ, ‘ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸರನ್ನಾಗಿ ಮಾಡಿಕೊಂಡು ನಾನೂರು ವರ್ಷಗಳ ತನಕ ಕ್ರೂರವಾಗಿ ನಡಿಸುವರು.’


ಮತ್ತು ‘ನಿನ್ನ ಸಂತಾನದವರು ದಾಸರಾಗಿ ಸೇವೆಸಲ್ಲಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆ ಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು’ ಎಂಬುದೇ.


ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.


ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.


ಇಸ್ರಾಯೇಲರನ್ನು ಅವರ ಗೋತ್ರಗಳಿಗನುಸಾರವಾಗಿ, ಐಗುಪ್ತದೇಶದಿಂದ ಹೊರಗೆ ಬರಮಾಡಬೇಕೆಂದು ಯೆಹೋವನು ಯಾರಿಗೆ ಹೇಳಿದನೋ ಅವರೇ ಆರೋನ್ ಮತ್ತು ಮೋಶೆ.


ಇಸ್ರಾಯೇಲರು ಐಗುಪ್ತ ದೇಶದಲ್ಲಿ ಸುಮಾರು ನಾನೂರಮೂವತ್ತು ವರ್ಷ ವಾಸವಾಗಿದ್ದರು.


ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.


ಮೋಶೆಯು ಯೆಹೋವನಿಗೆ ಹೇಳಿದ್ದೇನೆಂದರೆ, “‘ಈ ಜನರನ್ನು ಆ ಸೀಮೆಗೆ ನಡೆಸಿಕೊಂಡು ಹೋಗಬೇಕೆಂದು’ ನೀನು ನನಗೆ ಆಜ್ಞಾಪಿಸಿದಿಯಷ್ಟೇ. ನನ್ನ ಸಂಗಡ ಯಾರನ್ನು ಕಳುಹಿಸಿ ಕೊಡುವೆಯೆಂಬುದನ್ನು ನನಗೆ ತಿಳಿಸಲಿಲ್ಲವಲ್ಲಾ. ‘ಆದರೆ ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಿನಗೆ ನನ್ನ ದಯೆ ದೊರಕಿತೆಂದೂ’ ನೀನು ನನಗೆ ಹೇಳಿರುವೆಯಲ್ಲಾ.


ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ” ಎಂದು ಅರಿಕೆಮಾಡಿದನು.


ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಿಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ, ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ಈ ದೇಶದಲ್ಲಿ ನೆಲೆಗೊಳಿಸಿದನು.


ಆಗ ಯೆಹೋವನು ಅವನನ್ನು ಚೆನ್ನಾಗಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ನಿನ್ನ ಈ ಬಲದಿಂದ ಇಸ್ರಾಯೇಲ್ಯರನ್ನು ಮಿದ್ಯಾನ್ಯರಿಂದ ಬಿಡಿಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು