Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ಐಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆ ಈಜಿಪ್ಟಿನ ಅರಸನು ಎಷ್ಟು ಬಲಾತ್ಕಾರ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ತಿಳಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಐಗುಪ್ತದ ಅರಸನೋ, ಎಷ್ಟು ಬಲಾತ್ಕಾರಮಾಡಿದರೂ ನಿಮ್ಮನ್ನು ಬಿಡುವದಿಲ್ಲವೆಂದು ತಿಳಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಆದರೆ ಈಜಿಪ್ಟಿನ ರಾಜನು ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂಬುದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೂ ಈಜಿಪ್ಟಿನ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂದು ನನಗೆ ನಿಶ್ಚಯವಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:19
13 ತಿಳಿವುಗಳ ಹೋಲಿಕೆ  

ಆನಂತರ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ನೀನು ಈಗ ನೋಡುವೆ. ಅವನು ನನ್ನ ಬಲವಾದ ಹಸ್ತವನ್ನು ನೋಡಿ ಅವರನ್ನು ಹೋಗಗೊಡಿಸುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು” ಅಂದನು.


ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.


ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.


ಅದಕ್ಕೆ ಫರೋಹನು ಅವರಿಗೆ, “ನಿಮ್ಮ ದೇವರಾದ ಯೆಹೋವನಿಗೆ ಅರಣ್ಯದಲ್ಲಿ ಯಜ್ಞಮಾಡುವಂತೆ ನಾನು ನಿಮಗೆ ಅಪ್ಪಣೆ ಕೊಡುತ್ತೇನೆ. ಆದರೆ ಬಹಳ ದೂರ ಹೋಗಬಾರದು. ನನಗೋಸ್ಕರ ಪ್ರಾರ್ಥನೆ ಮಾಡಿರಿ” ಎಂದನು.


ಫರೋಹನು ವಿಚಾರಿಸಿದಾಗ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಆ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ.


ಯೆಹೋವನು ಮೋಶೆಯಿಂದ ಹೇಳಿಸಿದಂತೆಯೇ ಆಯಿತು. ಫರೋಹನ ಹೃದಯವು ಕಠಿಣವಾಗಿತ್ತು. ಅವನು ಇಸ್ರಾಯೇಲರನ್ನು ಹೋಗಲು ಬಿಡಲಿಲ್ಲ.


ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಕಳುಹಿಸಿಕೊಡಲು ಒಪ್ಪಲಿಲ್ಲ.


ಯೆಹೋವನು ಮೋಶೆಗೆ, “ಐಗುಪ್ತ ದೇಶದಲ್ಲಿ ನನ್ನ ಮಹತ್ಕಾರ್ಯಗಳನ್ನು ಇನ್ನೂ ಹೆಚ್ಚಾಗಿ ನಡೆಯಬೇಕಾಗಿರುವುದರಿಂದ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ” ಎಂದು ಹೇಳಿದನು.


ಮೋಶೆ ಮತ್ತು ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದರು. ಆದರೆ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದರಿಂದ ಫರೋಹನು ಇಸ್ರಾಯೇಲರಿಗೆ ತನ್ನ ದೇಶವನ್ನು ಬಿಟ್ಟು ಹೋಗುವುದಕ್ಕೆ ಅಪ್ಪಣೆ ಕೊಡದೆ ಹೋದನು.


ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು