Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ಇದಲ್ಲದೆ ಈ ನನ್ನ ಜನರ ಮೇಲೆ ಐಗುಪ್ತ್ಯರಿಗೆ ದಯೆಯುಂಟಾಗುವಂತೆ ಮಾಡುವೆನು. ಆದ್ದರಿಂದ ನೀವು ಹೊರಡುವಾಗ ಬರಿಗೈಯಲ್ಲಿ ಬರಬೇಕಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ನನ್ನ ಜನರಿಗೆ ಈಜಿಪ್ಟಿನವರು ಅನುಕಂಪ ತೋರಿಸುವಂತೆ ಮಾಡುವೆನು. ಆದ್ದರಿಂದ ನೀವು ಅಲ್ಲಿಂದ ಹೊರಡುವಾಗ ಬರಿಗೈಯಲ್ಲಿ ಹೋಗಬೇಕಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದಲ್ಲದೆ ಈ ನನ್ನ ಜನರಿಗೆ ಐಗುಪ್ತ್ಯರ ದಯೆ ದೊರಕುವಂತೆ ಮಾಡುವೆನು; ಆದದರಿಂದ ನೀವು ಹೊರಡುವಾಗ ಬರಿಗೈಲಿ ಹೋಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈಜಿಪ್ಟಿನ ಜನರು ಇಸ್ರೇಲರಿಗೆ ದಯೆ ತೋರುವಂತೆ ಮಾಡುವೆನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಡುವಾಗ ಈಜಿಪ್ಟಿನವರು ಅವರಿಗೆ ಉಡುಗೊರೆಗಳನ್ನು ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಇದಲ್ಲದೆ ಈ ಜನರಿಗೆ ಈಜಿಪ್ಟಿನವರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:21
13 ತಿಳಿವುಗಳ ಹೋಲಿಕೆ  

ಯೆಹೋವನು ಅವರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದ್ದರಿಂದ ಅವರು ಕೇಳಿಕೊಂಡದ್ದೆಲ್ಲವನ್ನು ಐಗುಪ್ತರು ಕೊಟ್ಟರು. ಹೀಗೆ ಇಸ್ರಾಯೇಲರು ಐಗುಪ್ತ್ಯರ ಸೊತ್ತನ್ನು ಸುಲಿದುಕೊಂಡರು.


ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ.


ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.


ಸೆರೆಯೊಯ್ದವರ ದಯೆಗೆ ಅವರು ಪಾತ್ರರಾಗುವಂತೆ ಮಾಡಿದನು.


ಆದರೆ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕರುಣೆಯನ್ನಿಟ್ಟು ಸೆರೆಮನೆಯ ಯಜಮಾನನಿಂದ ದಯೆ ದೊರಕುವಂತೆ ಮಾಡಿದನು.


ಅವನಿಗೆ ಬಂದ ಎಲ್ಲಾ ಕಷ್ಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯೆಗೆ ಪಾತ್ರನೂ, ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ, ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಮಾಡಿದನು.


ಯೆಹೋವನೇ, ಕೃಪೆಮಾಡು; ನಿನ್ನ ಸೇವಕನಾದ ನನ್ನ ಪ್ರಾರ್ಥನೆಗೂ, ನಿನ್ನ ನಾಮ ಸ್ಮರಣೆಯಲ್ಲಿ ಆನಂದಿಸುವ ನಿನ್ನ ಭಕ್ತರ ಪ್ರಾರ್ಥನೆಗೂ ಕಿವಿಗೊಡು. ನಿನ್ನ ಸೇವಕನು ಈಹೊತ್ತು ಈ ಮನುಷ್ಯನ ದಯೆಗೆ ಪಾತ್ರನಾಗಿ ಸಫಲನಾಗುವಂತೆ ಅನುಗ್ರಹಿಸಬೇಕು” ಎಂದು ಪ್ರಾರ್ಥಿಸಿದೆನು.


ಇಸ್ರಾಯೇಲರು ಮೋಶೆಯ ಮಾತಿನ ಮೇರೆಗೆ ಐಗುಪ್ತ್ಯರಿಂದ ಬೆಳ್ಳಿ ಬಂಗಾರದ ಒಡವೆಗಳನ್ನು, ಬಟ್ಟೆಗಳನ್ನು ಕೇಳಿ ಪಡೆದುಕೊಂಡರು.


ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ.


ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.


ಆದುದರಿಂದ ಸ್ತ್ರೀಪುರುಷರೆಲ್ಲರೂ ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬುದಾಗಿ ಜನರಿಗೆ ಸ್ಪಷ್ಟವಾಗಿ ಹೇಳು” ಎಂದನು.


ಬಿಡುಗಡೆ ಮಾಡುವಾಗ ಬರಿಗೈಯಲ್ಲಿ ಕಳುಹಿಸಿಬಿಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು