Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರು ಅವನಿಗೆ, “ನೀನು ಪೊದೆಯ ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಯಾಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಸ್ಥಳವಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇವರು ಅವನಿಗೆ, “ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರಭೂಮಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರು ಅವನಿಗೆ - ನೀನು ಹತ್ತಿರ ಬರಬೇಡ; ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂವಿು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೆಹೋವನು, “ಇನ್ನೂ ಹತ್ತಿರ ಬರಬೇಡ. ನಿನ್ನ ಪಾದರಕ್ಷೆಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ದೇವರು ಅವನಿಗೆ, “ಇಲ್ಲಿ ಸಮೀಪಕ್ಕೆ ಬರಬೇಡ, ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:5
12 ತಿಳಿವುಗಳ ಹೋಲಿಕೆ  

ಯೆಹೋವನ ಸೇನಾಧಿಪತಿಯು “ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು, ಏಕೆಂದರೆ ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು” ಎಂದು ಹೇಳಿದನು. ಯೆಹೋಶುವನು ಹಾಗೆಯೇ ಮಾಡಿದನು.


ಮತ್ತು ಕರ್ತನು ಅವನಿಗೆ, ‘ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು.


ಜನರು ಹತ್ತಿರ ಬಾರದಂತೆ ನೀನು ಬೆಟ್ಟದ ಸುತ್ತಲೂ ಗಡಿಯನ್ನು ಮಾಡಿಸಿ ಜನರಿಗೆ, ‘ಎಚ್ಚರಿಕೆಯಾಗಿರಿ, ನೀವು ಈ ಬೆಟ್ಟವನ್ನು ಏರದಂತೆಯೂ ಅದರ ಗಡಿಯನ್ನು ಮುಟ್ಟದಂತೆಯೂ ಜಾಗ್ರತೆಯಿಂದಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತುಹೋಗುವರು.’


ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವುದು ಲೇಸು. ತಾವು ತಪ್ಪು ಮಾಡುತ್ತಿದ್ದೇವೆಂಬುದು ಮೂಢರಿಗೆ ಗೊತ್ತೇ ಇಲ್ಲ.


ಏಕೆಂದರೆ, “ಒಂದು ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ” ವಿಧಿಯನ್ನು ಅವರಿಂದ ತಾಳಲಾಗಲಿಲ್ಲ.


ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ನಾವು ಪರಿಶುದ್ಧ ಪರ್ವತದ ಮೇಲೆ ಆತನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ವಾಣಿಯನ್ನು ನಾವು ಕೇಳಿಸಿಕೊಂಡೆವು.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಕಾಪಾಡುವುದಕ್ಕೂ, ಶತ್ರುಗಳನ್ನು ನಿಮ್ಮ ಕೈವಶಮಾಡುವುದಕ್ಕೂ ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾನಲ್ಲಾ; ಆದುದರಿಂದ ಪಾಳೆಯವು ನಿಮರ್ಲವಾಗಿರಬೇಕು; ನಿಮ್ಮಲ್ಲಿ ಅಶುದ್ಧವೇನಾದರೂ ಕಂಡುಬಂದರೆ ಆತನು ನಿಮ್ಮನ್ನು ಬಿಟ್ಟುಹೋದಾನು.


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು. ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.”


ಆಗ ಮೋಶೆಯು ಆರೋನನಿಗೆ, ತನ್ನನ್ನು ಕಳುಹಿಸಿದ ಯೆಹೋವನ ಎಲ್ಲಾ ಮಾತುಗಳನ್ನೂ, ತನಗೆ ಆಜ್ಞಾಪಿಸಿದ ಸೂಚಕಕಾರ್ಯಗಳನ್ನೂ, ತಾನು ಮಾಡಿದವುಗಳನ್ನೆಲ್ಲಾ ಆರೋನನಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು