Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈಗ ನಾನು ಇಳಿದುಹೋಗಿ ಈಜಿಪ್ಟಿನವರಿಂದ ನನ್ನ ಜನರನ್ನು ರಕ್ಷಿಸುವೆನು. ನಾನು ಅವರನ್ನು ಆ ದೇಶದಿಂದ ಬಿಡುಗಡೆ ಮಾಡಿ ಒಳ್ಳೆಯದಾದ ಮತ್ತು ವಿಶಾಲವಾದ ದೇಶಕ್ಕೆ ಅವರನ್ನು ನಡೆಸುವೆನು. ಅದು ಸಮೃದ್ಧಿಕರವಾದ ದೇಶ. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸವಾಗಿರುವ ದೇಶ ಅದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:8
54 ತಿಳಿವುಗಳ ಹೋಲಿಕೆ  

ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.


ಐಗುಪ್ತ ದೇಶದಲ್ಲಿ ನಿಮಗುಂಟಾದ ದುರವಸ್ಥೆಯಿಂದ ನಿಮ್ಮನ್ನು ಬಿಡಿಸಿ, ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಹಿವ್ವಿಯರೂ, ಯೆಬೂಸಿಯರೂ, ವಾಸವಾಗಿರುವ ದೇಶಕ್ಕೆ ಬರಮಾಡಬೇಕೆಂದು ನಿರ್ಣಯಿಸಿದ್ದೇನೆ” ಎಂಬುದಾಗಿ ಅವರಿಗೆ ಹೇಳು.


ಅವರು ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ, “ನಮ್ಮ ದೇವರಾದ ಯೆಹೋವನು ನಮಗೆ ಕೊಡುವ ಆ ದೇಶವು ಒಳ್ಳೆಯ ದೇಶ” ಎಂದು ನಮಗೆ ತಿಳಿಸಿದರು.


ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.


ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದೆನಷ್ಟೆ. ಆ ನನ್ನ ಮಾತು ಈಗ ಕೈಗೂಡಿದೆ” ಎಂದು ಸಾರಬೇಕು ಎಂದನು. ಆಗ ನಾನು, “ಅಪ್ಪಣೆಯಂತಾಗಲಿ, ಯೆಹೋವನೇ” ಎಂದು ಉತ್ತರಕೊಟ್ಟೆನು.


ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.


ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.


ಆ ದಿನದಲ್ಲಿ ನಾನು ಅವರಿಗೆ, ‘ಸಕಲ ದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿ ಹಾಲೂ ಮತ್ತು ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆನು.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.


ಅದೇ ದಿನದಲ್ಲಿ ಯೆಹೋವನು ಇಸ್ರಾಯೇಲರನ್ನು ಅವರವರ ಸೈನ್ಯಗಳ ಪ್ರಕಾರವಾಗಿ ಐಗುಪ್ತ ದೇಶದಿಂದ ಹೊರಗೆ ತಂದನು.


ಅವರ ಪೂರ್ವಿಕರಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ.


ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.


ನಿಮ್ಮ ಪೂರ್ವಿಕರ ದೇವರಾದ ಯೆಹೋವನು ತಾನು ವಾಗ್ದಾನಮಾಡಿದಂತೆ ನಿಮಗೆ ಕೊಡುವ ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ಪ್ರವೇಶಿಸುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟುವಾಗ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಆ ದೊಡ್ಡ ಕಲ್ಲುಗಳ ಮೇಲೆ ಬರೆಯಿಸಬೇಕು.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಅಧಿಕ ಸಂಖ್ಯೆಯಲ್ಲಿಯೂ ಮತ್ತು ಅಧಿಕ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವನು.


ಮನುಷ್ಯರು ಕಟ್ಟುತ್ತಿದ್ದ ಆ ಪಟ್ಟಣವನ್ನೂ, ಗೋಪುರವನ್ನೂ ನೋಡುವುದಕ್ಕೆ ಯೆಹೋವನು ಇಳಿದು ಬಂದನು.


ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.


ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು!


ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುವೆನು.


ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ” ಎಂದನು.


ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.


ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ, ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದರಿಂದ ನೀನು ನೀತಿಸ್ವರೂಪನು.


ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣ ಮಾಡಿದ ಮೇರೆಗೆ ನಿಮಗೆ ಕೊಡುವ ದೇಶದಲ್ಲಿ ಆತನು ನಿಮ್ಮ ಸಂತಾನ, ಪಶು ಮತ್ತು ವ್ಯವಸಾಯಗಳಲ್ಲಿ ಸಮೃದ್ಧಿಯನ್ನು ಉಂಟುಮಾಡುವನು.


ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.


ನಾನು ನಿಮ್ಮನ್ನು ಫಲವತ್ತಾದ ಸೀಮೆಗೆ ಕರೆತಂದು, ಅದರ ಫಲವನ್ನು ಮತ್ತು ಸಾರವನ್ನು ಅನುಭವಿಸುವ ಹಾಗೆ ಮಾಡಿದೆನು. ಆದರೆ ನೀವು ಆ ನನ್ನ ದೇಶವನ್ನು ಪ್ರವೇಶಿಸಿ, ಅದನ್ನು ಹೊಲೆ ಮಾಡಿ, ನನ್ನ ಸ್ವತ್ತನ್ನು ಅಸಹ್ಯಪಡಿಸಿದಿರಿ.


ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ


ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಎಂಬ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ.


ಅವರ ದೇಶವು ಒಳ್ಳೆಯದೋ ಅಥವಾ ಕೆಟ್ಟದ್ದೋ? ಅವರ ಪಟ್ಟಣಗಳು ಪಾಳೆಯಗಳೋ ಅಥವಾ ಕೋಟೆಗಳೋ?


ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.


ನಾನೇ ನಿನ್ನೊಂದಿಗೆ ಐಗುಪ್ತಕ್ಕೆ ಬರುವೆನು; ಅಲ್ಲಿಂದ ನಿಶ್ಚಯವಾಗಿ ನಿನ್ನನ್ನು ಪುನಃ ಕರೆದುಕೊಂಡು ಬರುವೆನು; (ನಿನ್ನ ಅವಸಾನಕಾಲದಲ್ಲಿ) ನಿನ್ನ ಮರಣದ ಸಮಯದಲ್ಲಿ ಯೋಸೇಫನು ನಿನ್ನೊಂದಿಗೆ ಇದ್ದು ಸಂತೈಸುವನು” ಎಂದು ಹೇಳಿದನು.


ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲಿಲ್ಲವಲ್ಲ” ಎಂದು ಹೇಳಿದನು.


ನಾನೂರಮೂವತ್ತು ವರ್ಷಗಳು ಕಳೆದನಂತರ ಅದೇ ದಿನದಲ್ಲಿಯೇ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತ ದೇಶವನ್ನು ಬಿಟ್ಟು ಹೊರಟುಹೋದವು.


ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.


ಇಸ್ರಾಯೇಲ್ಯರೇ, ನೀವು ಅಮ್ಮೋನಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು, ನಾನು ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡಿ, ನಲ್ವತ್ತು ವರ್ಷ ಅರಣ್ಯದಲ್ಲಿ ನಿಮ್ಮನ್ನು ನಡೆಸಿದೆನು.


ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.


ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.


ಅಲ್ಲಿನ ನಿವಾಸಿಗಳು ಬಲಿಷ್ಠರೋ ಅಥವಾ ಬಲಹೀನರೋ, ಬಹಳ ಜನರೋ ಅಥವಾ ಸ್ವಲ್ಪ ಜನರೋ,


ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.


ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ “ಬಹುಶಃ ನೀವು ನಮ್ಮ ದೇಶದ ನಿವಾಸಿಗಳೇ ಆಗಿರಬಹುದು. ಹೀಗಿರುವುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಕೊಟ್ಟರು.


ಹಿವ್ವಿಯರೂ, ಅರ್ಕಿಯರೂ, ಸೀನಿಯರೂ,


ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.


ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು