Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ನೀನು ಇಸ್ರಯೇಲರ ಜನಗಣತಿ ಮಾಡುವಾಗ ಲೆಕ್ಕಿಸಬೇಕಾದ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಕ್ಕೆ ಈಡಾಗಿ ಸರ್ವೇಶ್ವರನಾದ ನನಗೆ ತೆರಿಗೆಯನ್ನು ಕೊಡಬೇಕು. ಆಗ ಅವರಿಗೆ ಯಾವ ವಿಪತ್ತು ಸಂಭವಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ಖಾನೇಷುಮಾರಿಯಾಗತಕ್ಕ ಇಸ್ರಾಯೇಲ್ಯರನ್ನು ಲೆಕ್ಕಿಸುವಾಗ ಅವರೊಳಗೆ ವ್ಯಾಧಿಸಂಭವಿಸದಂತೆ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಕ್ಕೆ ಈಡಾಗಿ ಯೆಹೋವನಿಗೆ ಕಪ್ಪವನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಇಸ್ರೇಲರನ್ನು ಲೆಕ್ಕಿಸು. ಹೀಗಾಗಿ ಎಷ್ಟು ಮಂದಿ ಜನರಿರುತ್ತಾರೆಂದು ನೀನು ತಿಳಿದುಕೊಳ್ಳುವೆ. ಪ್ರತಿಸಾರಿ ಇದನ್ನು ಮಾಡಿದಾಗ, ಪ್ರತಿಯೊಬ್ಬನು ತನಗೋಸ್ಕರವಾಗಿ ಯೆಹೋವನಿಗೆ ತೆರಿಗೆಯನ್ನು ಕೊಡಬೇಕು. ಆಗ ಜನರಿಗೆ ಯಾವ ಕೇಡುಗಳೂ ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ನೀನು ಇಸ್ರಾಯೇಲರನ್ನು ಎಣಿಸಲು ಜನಗಣತಿಯನ್ನು ತೆಗೆದುಕೊಂಡಾಗ ಪ್ರತಿಯೊಬ್ಬನು ತನ್ನ ಜೀವನದ ವಿಮೋಚನೆಯ ಕ್ರಯವನ್ನು ಯೆಹೋವ ದೇವರಿಗೆ ಕೊಡಬೇಕು. ಈ ರೀತಿ ಮಾಡಿದಲ್ಲಿ ಅವರನ್ನು ಎಣಿಸುವಾಗ ಅವರಲ್ಲಿ ವ್ಯಾಧಿ ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:12
21 ತಿಳಿವುಗಳ ಹೋಲಿಕೆ  

ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು.


ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಲಿಲ್ಲ. ಈ ಜನಗಣತಿಯು ದಾವೀದನ ರಾಜ್ಯದ ವೃತ್ತಾಂತ ಗ್ರಂಥದಲ್ಲಿ ಲಿಖಿತವಾಗಲಿಲ್ಲ.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.


ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು.


ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.


ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು” ಎಂದು ಹೇಳಿದನು.


ನಿನ್ನ ಸಿಟ್ಟು ನಿನ್ನನ್ನು ಮರುಳುಗೊಳಿಸಿ ಕುಚೋದ್ಯಕ್ಕೆ ನೂಕದಂತೆ ನೋಡಿಕೋ! ಕೊಡಬೇಕಾದ ಈಡು ದೊಡ್ಡದೆಂದು ಹಿಂದೆಗೆಯಬೇಡ!


ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ, ‘ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು’ ಎಂದು ಅಪ್ಪಣೆಕೊಟ್ಟರೆ,


ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ ಅವನಿಗೆ, “ಯೆಹೋವನ ಸೇವಕನಾದ ಮೋಶೆಯ ವಿಧಿಗನುಸಾರವಾಗಿ ಇಸ್ರಾಯೇಲ್ ಸಮೂಹದವರೆಲ್ಲರು ದೇವದರ್ಶನದ ಗುಡಾರಕ್ಕೋಸ್ಕರ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಯೆರೂಸಲೇಮಿನ ಜನರಿಂದಲೂ ಕೂಡಿಸುವ ಹಾಗೆ ನೀನೇಕೆ ನೋಡಿಕೊಳ್ಳಲಿಲ್ಲ?


ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


‘ಮೂರು ವರ್ಷಗಳ ವರೆಗೆ ಬರಗಾಲ ಉಂಟಾಗಬೇಕೋ, ಇಲ್ಲವೆ ನೀನು ಮೂರು ತಿಂಗಳು ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ, ಇಲ್ಲವೆ ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಯೆಹೋವನು ಕಳುಹಿಸಿದ ಸಂಹಾರದೂತನಿಂದ ಉಂಟಾಗುವ ಮೂರು ದಿನಗಳ ಘೋರವ್ಯಾಧಿಯ ರೂಪವಾದ ಯೆಹೋವನ ಶಿಕ್ಷೆ ಬೇಕೋ, ಈ ಮೂರರಲ್ಲಿ ಒಂದನ್ನು ಆರಿಸಿಕೊ’ ಎಂಬುದೇ. ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು ಆಲೋಚಿಸಿ ಹೇಳು” ಎಂದು ಹೇಳಿದನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,


“ನಿನ್ನ ದಾಸರಾದ ನಾವು ನಮ್ಮ ಅಧಿಕಾರದೊಳಗೆ ಇದ್ದ ಭಟರನ್ನು ಲೆಕ್ಕಿಸಲಾಗಿ ಒಬ್ಬನಾದರೂ ಕಡಿಮೆಯಾಗಿಲ್ಲವೆಂದು ಗೊತ್ತಾಯಿತು.


ಸೈತಾನನು ಇಸ್ರಾಯೇಲರಿಗೆ ವಿರುದ್ಧ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.


ಆಗ ಯೋವಾಬನು, “ನನ್ನ ಒಡೆಯನಾದ ಅರಸನೇ, ಯೆಹೋವನು ತನ್ನ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ. ಅವರೆಲ್ಲರೂ ನನ್ನ ಒಡೆಯನ ದಾಸರಷ್ಟೆ. ಒಡೆಯನು ಇಂಥದ್ದನ್ನು ಅಪೇಕ್ಷಿಸುವುದೇನು? ಇಸ್ರಾಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ” ಎಂದನು.


ದೇವರ ಸೇವಕನಾದ ಮೋಶೆಯು ಅರಣ್ಯದಲ್ಲಿ ವಿಧಿಸಿದಂತೆ, ಇಸ್ರಾಯೇಲರು ಯೆಹೋವನಿಗೋಸ್ಕರ ಕೊಡಬೇಕಾದ ಕಾಣಿಕೆಯನ್ನು ತಂದು ಕೊಡಬೇಕು ಎಂಬುದಾಗಿ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು