Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನು ನನಗೆ ಅರ್ಧ ಶೆಕೆಲ್‍ ನಾಣ್ಯದ ಮೇರೆಗೆ ತೆರಿಗೆ ಕಟ್ಟಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಅರ್ಧರ್ಧ ನಾಣ್ಯವನ್ನು ತೆರಿಗೆಯಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿಯೊಬ್ಬನು ಯೆಹೋವನಿಗೆ ಅರ್ಧ ರೂಪಾಯಿಯ ಮೇರೆಗೆ ಕಪ್ಪ ಕೊಡಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧರ್ಧ ರೂಪಾಯಿ ಕಪ್ಪವಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ಅಧಿಕೃತ ಅಳತೆಗನುಸಾರವಾಗಿರುವ ಅರ್ಧಶೆಕೆಲ್ ಕಪ್ಪಕಾಣಿಕೆಯನ್ನು ಕೊಡಬೇಕು. ಈ ಅರ್ಧಶೆಕೆಲ್ ಯೆಹೋವನಿಗೆ ಕಾಣಿಕೆಯಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಲೆಕ್ಕಿತರಾದವರಲ್ಲಿ ಸೇರುವ ಪ್ರತಿಯೊಬ್ಬ ಮನುಷ್ಯನು ಕೊಡಬೇಕಾದದ್ದು ಏನೆಂದರೆ ಶೆಕೆಲಿಗೆ ಇಪ್ಪತ್ತು ಗೇರಾಗಳ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರ್ಧ ಶೆಕೆಲ್ ಕೊಡಬೇಕು. ಅರ್ಧ ಶೆಕೆಲ್ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:13
17 ತಿಳಿವುಗಳ ಹೋಲಿಕೆ  

ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇರೆಗೆ ಇರಬೇಕು. ಇಪ್ಪತ್ತು ಗೇರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು.


ದೇವಸ್ಥಾನದ ಸೇವೆಗೆ ನೇಮಕವಾದ ಶೆಕೆಲ್ ಗಳ ಮೇರೆಯ ಪ್ರಕಾರ ಒಬ್ಬೊಬ್ಬನಿಗೆ ಐದು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಳ್ಳಬೇಕು.


ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ತೊಲಾ ತೂಕದ್ದಾಗಿರಲಿ.”


ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.


ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಜನಗಣತಿಯಲ್ಲಿ ಎಣಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸುಳ್ಳವರ ಲೆಕ್ಕ ಆರು ಲಕ್ಷದ ಮೂರು ಸಾವಿರದ ಐನೂರ ಐವತ್ತು ಮಂದಿಯಾಗಿತ್ತು.


ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು


ಬಳಿಕ ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಹಣ ವಿನಿಮಯದಾರರ ಮೇಜುಗಳನ್ನೂ ಪಾರಿವಾಳ ಮಾರುವವರ ಕಾಲ್ಮಣೆಗಳನ್ನೂ ಕೆಡವಿಹಾಕಿದನು.


“ಸ್ವಾಮಿ, ನನ್ನ ಮಾತನ್ನು ಲಾಲಿಸು; ನಾನೂರು ಬೆಳ್ಳಿ ನಾಣ್ಯಗಳ ಬೆಲೆಬಾಳುವ ಭೂಮಿಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು” ಎಂದನು.


ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಆ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು.


ದೇವಮಂದಿರದ ಸಕಲವಿಧವಾದ ಕೆಲಸಗಳಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್.


“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.


ಇಪ್ಪತ್ತು ವರ್ಷದಿಂದ ಅರುವತ್ತು ವರ್ಷದ ವರೆಗಿನ ವಯಸ್ಸುಳ್ಳ ಪುರುಷನಿಗೋಸ್ಕರ, ದೇವಾಲಯದ ಶೆಕೆಲ್ ಗೆ ಸರಿಯಾಗಿ ಐವತ್ತು ಶೆಕೆಲ್ ಬೆಳ್ಳಿಯನ್ನು ಸಮರ್ಪಿಸಬೇಕು.


ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.


ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವಸ್ಥಾನದ ನಾಣ್ಯ ತೂಕದ ಪ್ರಕಾರ ಹತ್ತು ಶೆಕೆಲ್ ಮೇರೆಗೆ ಇರುವುದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ಶೆಕೆಲ್.


ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,


ಹೀಗೆ ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ನೀವು ಗೊತ್ತು ಮಾಡಿದ ಈಡನ್ನು ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ಶೆಕೆಲ್ ಪ್ರಕಾರ ಐದು ಶೆಕೆಲ್ ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.


ದೇವಾಲಯಕ್ಕೆ ಎಲ್ಲೆಲ್ಲಿ ದುರಸ್ತಿಯಾಗಬೇಕೆಂಬುದನ್ನು ನೋಡಿ ಅದನ್ನು ಸರಿಮಾಡುವುದಕ್ಕೋಸ್ಕರ ಉಪಯೋಗಿಸಿರಿ, ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣವನ್ನು ತೆಗೆದುಕೊಳ್ಳಬೇಕು” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು