Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪ್ರಾಣರಕ್ಷಣೆಯ ಈ ತೆರಿಗೆಯನ್ನು ನನಗೆ ಕೊಡುವವರಲ್ಲಿ ಐಶ್ವರ್ಯವಂತರು ಅರ್ಧನಾಣ್ಯಕ್ಕಿಂತ ಹೆಚ್ಚು ಕೊಡಬಾರದು; ಬಡವರು ಕಮ್ಮಿ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಪ್ರಾಣರಕ್ಷಣೆಯ ಕಪ್ಪವನ್ನು ಯೆಹೋವನಿಗೆ ಕೊಡುವದರಲ್ಲಿ ಐಶ್ವರ್ಯವಂತರು ಅರ್ಧ ರೂಪಾಯಿಗಿಂತ ಹೆಚ್ಚು ಕೊಡಬಾರದು, ಬಡವರು ಕಮ್ಮಿಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಐಶ್ವರ್ಯವಂತರು ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು; ಬಡವರು ಅರ್ಧಶೆಕೆಲಿಗಿಂತ ಕಡಿಮೆ ಕೊಡಬಾರದು. ಜನರೆಲ್ಲರೂ ಈ ಕಾಣಿಕೆಯನ್ನು ಯೆಹೋವನಿಗೆ ಅರ್ಪಿಸಬೇಕು. ಇದು ನಿಮ್ಮ ಪ್ರಾಣರಕ್ಷಣೆಯ ತೆರಿಗೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಜೀವನದ ಪ್ರಾಯಶ್ಚಿತ್ತಕ್ಕೆ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವುದರಲ್ಲಿ ಐಶ್ವರ್ಯವಂತರು ಅರ್ಧ ಶೇಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:15
12 ತಿಳಿವುಗಳ ಹೋಲಿಕೆ  

ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಪ್ರಾಯಶ್ಚಿತ್ತ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳಲ್ಲಿ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ” ಎಂದರು.


ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂತಹ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರ ಆಗುತ್ತದಷ್ಟೆ.


“ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು.


ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ದಂಡನೆಯನ್ನು ಹೊಂದುವನಷ್ಟೆ ಮತ್ತು ಅದರಲ್ಲಿ ಪಕ್ಷಪಾತವಿರುವುದಿಲ್ಲ.


ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.


ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ವತ್ತನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.


ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಆ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು.


ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.”


ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಜನಗಣತಿಯಲ್ಲಿ ಎಣಿಸಲ್ಪಟ್ಟವರಲ್ಲಿ ಇಪ್ಪತ್ತು ವರ್ಷದವರು ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸುಳ್ಳವರ ಲೆಕ್ಕ ಆರು ಲಕ್ಷದ ಮೂರು ಸಾವಿರದ ಐನೂರ ಐವತ್ತು ಮಂದಿಯಾಗಿತ್ತು.


ದೇಶದ ಸಕಲ ಜನರು ಇಸ್ರಾಯೇಲಿನ ಅರಸನಿಗೆ ಈ ಕಾಣಿಕೆಯನ್ನು ಒಪ್ಪಿಸತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು