Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸುಗಂಧ ದ್ರವ್ಯಕಾರರ ಪದ್ದತಿಯ ಮೇರೆಗೆ ಮಿಶ್ರಮಾಡಿ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡಿಸಬೇಕು. ಇದು ಪರಿಶುದ್ಧವಾದ ಅಭಿಷೇಕ ತೈಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಬುಕ್ಕಿಟ್ಟುಗಾರರ ಪದ್ಧತಿಯ ಮೇರೆಗೆ ಇವುಗಳನ್ನು ಮಿಶ್ರಮಾಡಿ ದೇವರ ಸೇವೆಗಾಗಿ ಅಭಿಷೇಕ ತೈಲವನ್ನು ತಯಾರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಬುಕ್ಕಿಟ್ಟುಗಾರರ ಪದ್ಧತಿಯ ಮೇರೆಗೆ ವಿುಶ್ರಮಾಡಿ ದೇವರ ಸೇವೆಗಾಗಿ ಅಭಿಷೇಕತೈಲವನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಸುವಾಸನೆಯುಳ್ಳ ಪವಿತ್ರ ಅಭಿಷೇಕತೈಲವನ್ನು ಮಾಡಲು ಇವುಗಳನ್ನೆಲ್ಲ ಒಟ್ಟಿಗೆ ಬೆರೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅದರಿಂದ ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು. ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:25
18 ತಿಳಿವುಗಳ ಹೋಲಿಕೆ  

ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು.


ಯಾಜಕ ಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲವನ್ನು ಮಾಡುತ್ತಿದ್ದರು.


“ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು.


ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,


ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.


ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.


ಸಭೆಯು ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.


ಅಭಿಷೇಕತೈಲವನ್ನು ಅವನ ಮೇಲೆ ಸುರಿದು ಅವನನ್ನು ಅಭಿಷೇಕಿಸಬೇಕು.


ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು.


ಐನೂರು ಸುಗಂಧವಾದ ಚೆಕ್ಕೆ, ಮತ್ತು ಒಂದು ಹೀನ್ ಒಲೀವ್ ಎಣ್ಣೆ ಇವುಗಳನ್ನೆಲ್ಲಾ ತೆಗೆದುಕೊಂಡು,


ಜನರು ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನದ ಮೇರೆಗೆ ಬೇರೆ ಕೆಲಸಕ್ಕಾಗಿ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು. ಇದು ಪರಿಶುದ್ಧವಾದದ್ದು ಎಂದು ನೀವು ತಿಳಿದುಕೊಳ್ಳಬೇಕು.


ಸುಗಂಧ ದ್ರವ್ಯ ತಯಾರಿಸುವವರ ಕೌಶಲ್ಯಕ್ಕೆ ತಕ್ಕಂತೆ ಕಲಿಸಿ ಉಪ್ಪು ಹಾಕಿ ದೇವರ ಸೇವೆಗೆ ಪವಿತ್ರವಾದ ಧೂಪದ್ರವ್ಯವನ್ನು ಮಾಡಿಸಬೇಕು.


ಧೂಪವೇದಿ, ಅದರ ಕಂಬಗಳು, ಅಭಿಷೇಕ ತೈಲ, ಪರಿಮಳಧೂಪದ್ರವ್ಯ, ಗುಡಾರದ ಬಾಗಿಲಿನ ಪರದೆ,


“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,


ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.


ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.


ಅವರು ನನಗೆ ಯಾಜಕಸೇವೆ ಮಾಡುವುದಕ್ಕಾಗಿ ಆ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ, ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಸೇವೆಗಾಗಿ ಪ್ರತಿಷ್ಠಿಸಿ ಶುದ್ಧೀಕರಿಸಿಬೇಕು.


ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೇ ಕೊಂಬನ್ನೂದಿ ಎಲ್ಲಾ ಜನರು “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು